<p><strong>ಬೆಂಗಳೂರು: </strong>ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ತರುವ ಪ್ರಯತ್ನದ ಜತೆಗೇ ಈಗ ತುಂಗಾ ಮತ್ತು ಭದ್ರಾ ನದಿಯಿಂದಲೂ ನೀರು ಹರಿಸುವ ಮತ್ತೊಂದು ಪ್ರಯತ್ನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.</p>.<p>ಬೆಂಗಳೂರಿಗೆ ತುಂಗಾ, ಭದ್ರಾ ನದಿಯಿಂದ 18 ಟಿಎಂಸಿ ಅಡಿಗಳಷ್ಟು ನೀರು ತರುವ ಸಾಧ್ಯತೆಗಳ ಬಗ್ಗೆ ಯೋಜನೆಯ ರೂಪುರೇಷೆ ಸಿದ್ಧಪಡಿಸುವಂತೆ ಮುಖ್ಯಮಂತ್ರಿಎಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.</p>.<p>ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಜತೆ ಮಂಗಳವಾರ ನಡೆದ ಸಭೆಯಲ್ಲಿ ತುಂಗಾ, ಭದ್ರಾ ನದಿಗಳ ಪಾತ್ರದಿಂದ ನೀರು ತರುವ ವಿಚಾರವನ್ನು ಎಂಜಿನಿಯರುಗಳು ಪ್ರಸ್ತಾಪಿಸಿದರು. ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, ಯೋಜನೆ ಸಿದ್ಧಪಡಿಸುವಂತೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಲಿಂಗನಮಕ್ಕಿ ಜಲಾಶಯದಿಂದ 30 ಟಿಎಂಟಿ ಅಡಿಗಳಷ್ಟು ನೀರನ್ನು ಬೆಂಗಳೂರಿಗೆ ತರುವ ಸಂಬಂಧ ಹಿಂದಿನ ಸರ್ಕಾರದಲ್ಲಿ ಯೋಜನೆ ರೂಪಿಸಲಾಗಿದ್ದು, ಅದಕ್ಕೂ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆಸಲಹೆ ಮಾಡಿದ್ದಾರೆ.</p>.<p>ಲಿಂಗನಮಕ್ಕಿಯಿಂದ ನೀರು ತಂದರೆ ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೂ ಕುಡಿಯಲು ಕೊಡಬಹುದು. ನೀರು ತರಲು ಯಾವ ಯೋಜನೆ ಸಹಕಾರಿಯಾಗಲಿದೆ ಎಂಬ ಬಗ್ಗೆ ಚಿಂತನೆ ನಡೆಸುವಂತೆಯೂ ಮುಖ್ಯಮಂತ್ರಿ ತಿಳಿಸಿದರು.</p>.<p>ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯಲು₹6 ಸಾವಿರ ಕೋಟಿ ಹಣದ ಅಗತ್ಯವಿದ್ದು, ಆ ಕಡೆಗೂ ಆದ್ಯತೆ ಮೇಲೆಗಮನ ಹರಿಸುವಂತೆಯೂತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ತರುವ ಪ್ರಯತ್ನದ ಜತೆಗೇ ಈಗ ತುಂಗಾ ಮತ್ತು ಭದ್ರಾ ನದಿಯಿಂದಲೂ ನೀರು ಹರಿಸುವ ಮತ್ತೊಂದು ಪ್ರಯತ್ನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.</p>.<p>ಬೆಂಗಳೂರಿಗೆ ತುಂಗಾ, ಭದ್ರಾ ನದಿಯಿಂದ 18 ಟಿಎಂಸಿ ಅಡಿಗಳಷ್ಟು ನೀರು ತರುವ ಸಾಧ್ಯತೆಗಳ ಬಗ್ಗೆ ಯೋಜನೆಯ ರೂಪುರೇಷೆ ಸಿದ್ಧಪಡಿಸುವಂತೆ ಮುಖ್ಯಮಂತ್ರಿಎಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.</p>.<p>ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಜತೆ ಮಂಗಳವಾರ ನಡೆದ ಸಭೆಯಲ್ಲಿ ತುಂಗಾ, ಭದ್ರಾ ನದಿಗಳ ಪಾತ್ರದಿಂದ ನೀರು ತರುವ ವಿಚಾರವನ್ನು ಎಂಜಿನಿಯರುಗಳು ಪ್ರಸ್ತಾಪಿಸಿದರು. ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, ಯೋಜನೆ ಸಿದ್ಧಪಡಿಸುವಂತೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಲಿಂಗನಮಕ್ಕಿ ಜಲಾಶಯದಿಂದ 30 ಟಿಎಂಟಿ ಅಡಿಗಳಷ್ಟು ನೀರನ್ನು ಬೆಂಗಳೂರಿಗೆ ತರುವ ಸಂಬಂಧ ಹಿಂದಿನ ಸರ್ಕಾರದಲ್ಲಿ ಯೋಜನೆ ರೂಪಿಸಲಾಗಿದ್ದು, ಅದಕ್ಕೂ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆಸಲಹೆ ಮಾಡಿದ್ದಾರೆ.</p>.<p>ಲಿಂಗನಮಕ್ಕಿಯಿಂದ ನೀರು ತಂದರೆ ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೂ ಕುಡಿಯಲು ಕೊಡಬಹುದು. ನೀರು ತರಲು ಯಾವ ಯೋಜನೆ ಸಹಕಾರಿಯಾಗಲಿದೆ ಎಂಬ ಬಗ್ಗೆ ಚಿಂತನೆ ನಡೆಸುವಂತೆಯೂ ಮುಖ್ಯಮಂತ್ರಿ ತಿಳಿಸಿದರು.</p>.<p>ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯಲು₹6 ಸಾವಿರ ಕೋಟಿ ಹಣದ ಅಗತ್ಯವಿದ್ದು, ಆ ಕಡೆಗೂ ಆದ್ಯತೆ ಮೇಲೆಗಮನ ಹರಿಸುವಂತೆಯೂತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>