‘ತುಂಗಭದ್ರಾ ಅಣೆಕಟ್ಟೆಗೆ ಮಲೆನಾಡಿನಿಂದ ನೀರು ಹರಿದು ಬರುತ್ತದೆ. ಅಲ್ಲಿನ ಕಾಫಿ, ತೆಂಗು, ಅಡಿಕೆ ತೋಟಗಳಿಗೆ ಹೆಚ್ಚಿನ ರಸಾಯನಿಕ ಬಳಸುತ್ತಾರೆ. ಹೊಲ, ಗದ್ದೆಗಳಲ್ಲಿ ರಸಗೊಬ್ಬರ ಹಾಕುತ್ತಾರೆ. ಜಲಾಶಯದ ಸುತ್ತಮುತ್ತಲಿರುವ ಕಾರ್ಖಾನೆಗಳು ವಿಷಕಾರಕ ರಸಾಯನಿಕಗಳು ನೇರವಾಗಿ ನದಿಗೆ ಬೀಡುತ್ತವೆ. ಎಲ್ಲವೂ ಸೇರಿಕೊಂಡು ಸಯಾನೋ ಬ್ಯಾಕ್ಟಿರಿಯಾಗಳು ಹುಟ್ಟಿಕೊಂಡು, ಇಡೀ ನೀರನ್ನು ಹಸಿರು ಬಣ್ಣಕ್ಕೆ ತಿರುಗಿಸುತ್ತವೆ’ ಎನ್ನುತ್ತಾರೆ ಪರಿಸರ ತಜ್ಞ ಸಮದ್ ಕೊಟ್ಟೂರು.