ರಾಮನಗರ: ಚನ್ನಪಟ್ಟಣದ ಮಂಗಳವಾರಪೇಟೆ ಬಳಿ ಸೋಮವಾರ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬುಲೆಟ್ ಬೈಕ್ ಗೆ ಬಸ್ ಡಿಕ್ಕಿಯಾಗಿ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟರು.
ಕೂಡ್ಲೂರು ನಿವಾಸಿಗಳಾದ ಸಚಿನ್ (22) ಹಾಗೂ ಪ್ರತಾಪ್ (18) ಮೃತರು. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಗಳಾಗಿದ್ದ ಇಬ್ಬರು ಹೆದ್ದಾರಿ ಪಕ್ಕದ ಬಂಕ್ ನಲ್ಲಿ ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ಆಗುವ ವೇಳೆ ಖಾಸಗಿ ಬಸ್ ಡಿಕ್ಕಿಯಾಯಿತು.
ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ