ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ಗೆ ಬಸ್ ಡಿಕ್ಕಿ: ಇಬ್ಬರು ಯುವಕರು ಸಾವು

Last Updated 2 ಮಾರ್ಚ್ 2020, 5:33 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣದ ಮಂಗಳವಾರಪೇಟೆ ಬಳಿ ಸೋಮವಾರ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬುಲೆಟ್ ಬೈಕ್ ಗೆ ಬಸ್ ಡಿಕ್ಕಿಯಾಗಿ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟರು.

ಕೂಡ್ಲೂರು ನಿವಾಸಿಗಳಾದ ಸಚಿನ್ (22) ಹಾಗೂ ಪ್ರತಾಪ್ (18) ಮೃತರು. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಗಳಾಗಿದ್ದ ಇಬ್ಬರು ಹೆದ್ದಾರಿ ಪಕ್ಕದ ಬಂಕ್ ನಲ್ಲಿ ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ಆಗುವ ವೇಳೆ ಖಾಸಗಿ ಬಸ್ ಡಿಕ್ಕಿಯಾಯಿತು.

ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT