ಬೆಂಗಳೂರು: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಪಡಿತರವನ್ನು ಏಪ್ರಿಲ್ 1ರಂದೇ ನೀಡಲಾಗುವುದು ಎಂದುಶನಿವಾರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಭಾನುವಾರ ಜನತಾ ಕರ್ಫ್ಯೂ ಇರುವುದರಿಂದ ನ್ಯಾಯಬೆಲೆ ಅಂಗಡಿಗಳೂ ಮುಚ್ಚಿರಲಿವೆ. ಆದರೆ, ಸೋಮವಾರ ಮತ್ತು ಮಂಗಳವಾರ ಬೆಳಿಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು.