ಮಂಗಳೂರು: ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರನ್ನು ಸೋಮವಾರ ವೈದ್ಯಕೀಯ ನಿಗಾಕ್ಕಾಗಿ ಪ್ರತ್ಯೇಕ ವಾರ್ಡ್ಗೆ ದಾಖಲು ಮಾಡಲಾಗಿದೆ.
ಇಬ್ಬರೂ ಇತ್ತೀಚೆಗಷ್ಟೇ ವಿದೇಶಗಳಿಂದ ವಾಪಸಾಗಿದ್ದರು. ಕೆಮ್ಮು, ಶೀತ ಮತ್ತು ಜ್ವರದ ಲಕ್ಷಣಗಳು ಕಂಡುಬಂದ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಟಲಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
‘ವಿದೇಶಗಳಿಂದ ಬಂದವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಅಂತಹವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಪ್ರತ್ಯೇಕ ವಾರ್ಡ್ಗೆ ದಾಖಲಿಸಲಾಗುತ್ತಿದೆ. ಸೋಮವಾರ ಕೂಡ ಇಬ್ಬರನ್ನು ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ದಾಖಲಿಸಿರುವವರ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದರು.