<p><strong>ಧಾರವಾಡ</strong>: ಕೋವಿಡ್-19 ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿಯನ್ನು ಪತ್ರಕರ್ತರೊಬ್ಬರ ಭಾವಚಿತ್ರ ಹಾಗೂ ಕಾಲ್ಪನಿಕ ಹೆಸರನೊಂದಿಗೆಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.</p>.<p>ಇಲ್ಲಿನ ಹೊಸಯಲ್ಲಾಪುರ ವ್ಯಕ್ತಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟ ಸಂದರ್ಭದಲ್ಲಿ ಇಂಥದ್ದೊಂದು ಸುದ್ದಿ ಹರಿದಾಡಿತ್ತು. ಇದನ್ನು ಹರಿಯಬಿಟ್ಟವರು ಪ್ರಮೋದ ಮಹಾಬಲಶೆಟ್ಟಿ ಹಾಗೂ ಅಭಿಷೇಕ ಮಲ್ಹಾರಿ ಎಂಬುವವರೇ ಎಂದು ಪತ್ತೆ ಮಾಡಿದ ಸೈಬರ್ ಠಾಣೆ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ವಿದ್ಯಾಗಿರಿ ಹಾಗೂ ಶಹರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.</p>.<p>ಮಾರ್ಚ್ 22ರಂದು ಸಾಮಾಜಿಕ ಜಾಲತಾಣದಲ್ಲಿ ಈ ಸುಳ್ಳು ಸುದ್ದಿ ಹರಿದಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು.ಇದರ ಆಧಾರದ ಇನ್ಸ್ಪೆಕ್ಟರ್ ಪ್ರಭುಗೌಡ ಅವರ ನೇತೃತ್ವದಲ್ಲಿ ತನಿಖೆ ಕೈಗೊಂಡ ಸೈಬರ್ ವಿಭಾಗದ ಪೊಲೀಸರು, ಸುಳ್ಳು ಸುದ್ದಿ ಹರಡಿದ ಈ ಇಬ್ಬರನ್ನು ಬಂಧಿಸಿದ್ದಾರೆ.</p>.<p>ಯುವಕರಿಂದ ಮುಚ್ಚಳಿಕೆ ಬರೆಯಿಸಿಕೊಂಡಿರುವ ಪೊಲೀಸರು, ₹1ಲಕ್ಷ ಮೌಲ್ಯದ ಬಾಂಡ್ ಪಡದು ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ. ಇಂಥ ಕೃತ್ಯಗಳನ್ನು ಮತ್ತೆ ನಡೆಸಿದರೆ ಮೊಕದ್ದಮೆ ದಾಖಲಿಸಿ ₹5ಲಕ್ಷ ದಂಡ ಮತ್ತು ಕಠಿಣ ಕ್ರಮ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಕಮಿಷನರೇಟ್ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೃಷ್ಣಕಾಂತ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕೋವಿಡ್-19 ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿಯನ್ನು ಪತ್ರಕರ್ತರೊಬ್ಬರ ಭಾವಚಿತ್ರ ಹಾಗೂ ಕಾಲ್ಪನಿಕ ಹೆಸರನೊಂದಿಗೆಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.</p>.<p>ಇಲ್ಲಿನ ಹೊಸಯಲ್ಲಾಪುರ ವ್ಯಕ್ತಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟ ಸಂದರ್ಭದಲ್ಲಿ ಇಂಥದ್ದೊಂದು ಸುದ್ದಿ ಹರಿದಾಡಿತ್ತು. ಇದನ್ನು ಹರಿಯಬಿಟ್ಟವರು ಪ್ರಮೋದ ಮಹಾಬಲಶೆಟ್ಟಿ ಹಾಗೂ ಅಭಿಷೇಕ ಮಲ್ಹಾರಿ ಎಂಬುವವರೇ ಎಂದು ಪತ್ತೆ ಮಾಡಿದ ಸೈಬರ್ ಠಾಣೆ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ವಿದ್ಯಾಗಿರಿ ಹಾಗೂ ಶಹರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.</p>.<p>ಮಾರ್ಚ್ 22ರಂದು ಸಾಮಾಜಿಕ ಜಾಲತಾಣದಲ್ಲಿ ಈ ಸುಳ್ಳು ಸುದ್ದಿ ಹರಿದಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು.ಇದರ ಆಧಾರದ ಇನ್ಸ್ಪೆಕ್ಟರ್ ಪ್ರಭುಗೌಡ ಅವರ ನೇತೃತ್ವದಲ್ಲಿ ತನಿಖೆ ಕೈಗೊಂಡ ಸೈಬರ್ ವಿಭಾಗದ ಪೊಲೀಸರು, ಸುಳ್ಳು ಸುದ್ದಿ ಹರಡಿದ ಈ ಇಬ್ಬರನ್ನು ಬಂಧಿಸಿದ್ದಾರೆ.</p>.<p>ಯುವಕರಿಂದ ಮುಚ್ಚಳಿಕೆ ಬರೆಯಿಸಿಕೊಂಡಿರುವ ಪೊಲೀಸರು, ₹1ಲಕ್ಷ ಮೌಲ್ಯದ ಬಾಂಡ್ ಪಡದು ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ. ಇಂಥ ಕೃತ್ಯಗಳನ್ನು ಮತ್ತೆ ನಡೆಸಿದರೆ ಮೊಕದ್ದಮೆ ದಾಖಲಿಸಿ ₹5ಲಕ್ಷ ದಂಡ ಮತ್ತು ಕಠಿಣ ಕ್ರಮ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಕಮಿಷನರೇಟ್ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೃಷ್ಣಕಾಂತ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>