ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರೋಧಿಗಳ ಜತೆ ಸ್ನೇಹ ಬೇಕಿತ್ತಾ: ಸಚಿವ ಯು.ಟಿ. ಖಾದರ್ ಪ್ರಶ್ನೆ

Last Updated 18 ಫೆಬ್ರುವರಿ 2019, 11:36 IST
ಅಕ್ಷರ ಗಾತ್ರ

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಪಾಕಿಸ್ತಾನಕ್ಕೆ ಹೋಗಿ ಚಹಾ ಕುಡಿದು ಬರುವ ಅಗತ್ಯವಿತ್ತೇ? ವಿರೋಧಿಗಳ ಜತೆ ಸ್ನೇಹ ಬಯಸಬೇಕಿತ್ತೇ ಎಂದು ಸಚಿವ ಯು.ಟಿ. ಖಾದರ್ ಪ್ರಶ್ನಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ವಿರೋಧಿಗಳು ಎಂಬುದು ಗೊತ್ತಿದ್ದರೂ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಅಲ್ಲಿಗೆ ಹೋಗಿದ್ದು ಸರಿಯಲ್ಲ. ಹಾಗಂತ ನಾವೀಗ ರಾಜಕೀಯ ಮಾಡಲು ಹೋಗುವುದಿಲ್ಲ. ದೇಶದ ಅಖಂಡತೆಯ ವಿಚಾದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿದರು.

ಕೇಂದ್ರ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕಿದೆ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT