ಪುತ್ತಿಗೆ ಮಠಕ್ಕೆ ಉತ್ತರಾಧಿಕಾರಿಯಾಗಿ ನೇಮಕವಾಗಿರುವ ಪ್ರಶಾಂತ್ ಆಚಾರ್ಯ ಎಂಜಿನಿಯರಿಂಗ್ ಶಿಕ್ಷಣ ಪಡೆದಿದ್ದು, ಅವರಿಗೆ ಸಂಸ್ಕೃತದ ಸಾಮಾನ್ಯ ಜ್ಞಾನವೂ ಇಲ್ಲ. ಮಧ್ವಾಚಾರ್ಯರ ಧಾರ್ಮಿಕ ಚಿಂತನೆಗಳ ಅರಿವಿಲ್ಲ. ಅರ್ಹತೆ ಇಲ್ಲದ ವ್ಯಕ್ತಿಗೆ ಕೃಷ್ಣನ ಪೂಜೆ ಮಾಡಲು ಅವಕಾಶ ನೀಡಬಾರದು ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.