ಉಡುಪಿ: ರಾಜ್ಯದ ಇತರೆ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಿದ್ದರೂ ಕೃಷ್ಣಮಠದಲ್ಲಿ 10ರಿಂದ 15 ದಿನಗಳ ನಂತರ ಸಂದರ್ಭಾನುಸಾರ ಕೊರೊನಾ ಪರಿಣಾಮ ಗಮನಿಸಿ, ಇತರ ಮಠಾಧೀಶರ ಸಹಮತ, ಸಲಹೆ ಸೂಚನೆ ಅನುಸರಿಸಿ ಭಕ್ತರಿಗೆ ಮುಕ್ತವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.