ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು, ‘ರಾತ್ರೋ ರಾತ್ರಿ ಗೋವಾದ ಹತ್ತು ಶಾಸಕರು, ಆಂಧ್ರ, ತೆಲಂಗಾಣದ ರಾಜ್ಯಸಭಾ ಸದಸ್ಯರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ರಾಜ್ಯದಲ್ಲಿ ಶಾಸಕರಿಗೆ ₹30–40 ಕೋಟಿ ಆಮಿಷ ಒಡ್ಡಿ ಸುಮಾರು ₹1 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಆದರೆ ಆ ಬಗ್ಗೆ ಕೇಂದ್ರದ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಯಾಕೆ ಮೌನವಾಗಿದೆ’ ಎಂದರು.