ಈ ಕುರಿತಂತೆ ‘ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಡಿ.ಎನ್. ನಂಜುಂಡ ರೆಡ್ಡಿ , ‘ಜಾಧವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಅದನ್ನು ವಿಧಾನಸಭಾಧ್ಯಕ್ಷರು ಅಂಗೀಕರಿಸಲೇಬೇಕು. ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಈ ಕುರಿತಂತೆ ಅವರ ವಿರುದ್ಧ ಯಾವುದೇ ದೂರುಗಳೂ ಇಲ್ಲ. ಹೀಗಿರುವಾಗ, ಅವರ ರಾಜೀನಾಮೆ ಅಂಗೀಕರಿಸದೆ ಬೇರೆ ವಿಧಿಯಿಲ್ಲ’ ಎಂದು ಹೇಳಿದರು.