‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದರೆ ಸಂತ್ರಸ್ತರಿಗೆ ಪ್ರಯೋಜನ ಆಗುವುದಿಲ್ಲ, ಕೇಂದ್ರದಿಂದ ಹಣ ತರಲಿ’ ಎಂಬ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿಕೆಗೆ, ‘ವಿರೋಧ ಪಕ್ಷದಲ್ಲಿದ್ದವರು ನಮ್ಮನ್ನು ಹೊಗಳುವುದಿಲ್ಲ. ಅವರ ಕೆಲಸ ಅವರು ಮಾಡುತ್ತಿದ್ದಾರೆ. ಆಡಳಿತದಲ್ಲಿದ್ದುಕೊಂಡು ನಮ್ಮ ಕೆಲಸ ನಾವು ನಿರ್ವಹಿಸುತ್ತಿದ್ದೇವೆ. ಪರಿಹಾರ ನೀಡಲು ಹಣದ ಕೊರತೆ ಇಲ್ಲ. ಜಿಲ್ಲೆಗೆ ₹ 500 ಕೋಟಿ ಬಿಡುಗಡೆ ಮಾಡಿದ್ದೇವೆ. ಕೇಂದ್ರದಿಂದಲೂ ಬರುತ್ತದೆ. ಅಲ್ಲಿವರೆಗೆ ನಮ್ಮಲ್ಲಿರುವ ಹಣದಲ್ಲಿಯೇ ಕೆಲಸ ಆರಂಭಿಸಿದ್ದೇವೆ’ ಎಂದು ಸಮರ್ಥಿಸಿಕೊಂಡರು.