ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಭೇಟಿ ಮಾಡಿದ ಕತ್ತಿ: ಸಚಿವ ಸ್ಥಾನದ ಭರವಸೆ ಕೊಟ್ಟ ಸಿಎಂ

Last Updated 3 ಜೂನ್ 2020, 12:07 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಉಮೇಶ ಕತ್ತಿ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಆದಷ್ಟು ಬೇಗ ಸಚಿವರನ್ನಾಗಿ ಮಾಡುತ್ತೇನೆ. ಆ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ ಎಂದು ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಕಳೆದ ವಾರ ಭೋಜನ ಕೂಟ ನಡೆಸಿದ ಉಮೇಶ್ ಕತ್ತಿ ಇಂದು ಮುಖ್ಯಮಂತ್ರಿಯವರ ಜತೆ ಸುಮಾರು 20 ನಿಮಿಷ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕಳೆದ ವಾರದ ಸಭೆಯಲ್ಲಿ ಶಾಸಕರು ಮತ್ತು ತಮ್ಮ ಮಧ್ಯೆ ನಡೆದ ಮಾತುಕತೆಯ ವಿವರಗಳನ್ನು ನೀಡಿದರು. ಪ್ರತಿಯೊಬ್ಬ ಶಾಸಕನ ಅಭಿಪ್ರಾಯವನ್ನೂ ಅವರು ಹೇಳಿದರು.

ಈ ಸಂದರ್ಭದಲ್ಲಿ ಕತ್ತಿ ತಮ್ಮ ಸಹೋದರ ರಮೇಶ್‌ ಕತ್ತಿ ಅವರಿಗೆ ರಾಜ್ಯಸಭೆಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದರು. ಟಿಕೆಟ್‌ ಕೊಡುವ ಅಥವಾ ಬಿಡುವ ವಿಚಾರ ವರಿಷ್ಠರಿಗೆ ಸೇರಿದ್ದು, ಎಲ್ಲವನ್ನೂ ಅವರೇ ನಿರ್ಧರಿಸುತ್ತಾರೆ. ಆದರೆ, ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಿಸಿ, ನಿನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಯಡಿಯೂರಪ್ಪ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT