ಈ ಸಂದರ್ಭದಲ್ಲಿ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿ ಅವರಿಗೆ ರಾಜ್ಯಸಭೆಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು. ಟಿಕೆಟ್ ಕೊಡುವ ಅಥವಾ ಬಿಡುವ ವಿಚಾರ ವರಿಷ್ಠರಿಗೆ ಸೇರಿದ್ದು, ಎಲ್ಲವನ್ನೂ ಅವರೇ ನಿರ್ಧರಿಸುತ್ತಾರೆ. ಆದರೆ, ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಿಸಿ, ನಿನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಯಡಿಯೂರಪ್ಪ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.