ಮಂಗಳೂರು: ಅನಾರೋಗ್ಯ ಕಾರಣದಿಂದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಧರ್ಮಸ್ಥಳ ಭೇಟಿಯನ್ನು ಕೊನೆಕ್ಷಣದಲ್ಲಿ ರದ್ದು ಪಡಿಸಲಾಗಿದೆ.
ಧರ್ಮಸ್ಥಳದಲ್ಲಿ ನವೀಕೃತ ಮಂಜೂಷಾ ವಸ್ತು ಸಂಗ್ರಹಾಲಯ ಉದ್ಘಾಟಿಸಲು ಹಾಗೂ ಪಟ್ಟಾಭಿಷಿಕ್ತರಾಗಿ 50ನೇ ವರ್ಷ ಪೂರೈಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಲು ಸಿಎಂ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಬರುವ ನಿರೀಕ್ಷೆ ಇತ್ತು.
ಮಧ್ಯಾಹ್ನ 3 ಗಂಟೆ ಸುಮಾರಿಗೆ ಧರ್ಮಸ್ಥಳಕ್ಕೆ ಆಗಮಿಸಬೇಕಿದ್ದ ಕುಮಾರಸ್ವಾಮಿ ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಲಾಗಿತ್ತು.