<p><strong>ಬೆಂಗಳೂರು: </strong>ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಅನಧಿಕೃತ ಫ್ಲೆಕ್ಸ್ ಹಾವಳಿ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಇ–ಮೇಲ್ ಕಳುಹಿಸಿರುವ ಅನಾಮಧೇಯ ವ್ಯಕ್ತಿಯ ಬಗ್ಗೆ ಸೈಬರ್ ಪೊಲೀಸರಿಂದ ತನಿಖೆ ನಡೆಸಲು ಮುಖ್ಯ ನ್ಯಾಯಮೂರ್ತಿ ಆದೇಶಿಸಿದ್ದಾರೆ.</p>.<p>ಅನಧಿಕೃತ ಫ್ಲೆಕ್ಸ್ ಹಾವಳಿ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಈ ವಿಷಯ ಪ್ರಸ್ತಾಪಿಸಿದ ನ್ಯಾಯಪೀಠ, ‘ಒಂದು ಪ್ರಕರಣ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವಾಗ ಇ-ಮೇಲ್ ಕಳುಹಿಸುವುದು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡಿದಂತಾಗುತ್ತದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>‘ಯಾರು ಬೇಕಾದರೂ ಕೋರ್ಟ್ಗೆ ಹಾಜರಾಗಿ ತಮ್ಮ ಅಹವಾಲು ಸಲ್ಲಿಸಲು ಮುಕ್ತ ಅವಕಾಶವಿದೆ. ಆದರೆ, ಇ-ಮೇಲ್ ಕಳುಹಿಸುವುದು ಸೂಕ್ತ ಮಾರ್ಗವಲ್ಲ. ಈ ರೀತಿ ಮಾಡಿದರೆ ಕೋರ್ಟ್ಗೆ ತನ್ನ ಕೆಲಸ ನಿರ್ವಹಿಸಲು ಕಷ್ಟವಾಗುತ್ತದೆ’ ಎಂದು ಹೇಳಿತು.</p>.<p>‘ಈ ಕುರಿತು ಸೈಬರ್ ಪೊಲೀಸರಿಂದ ಕೂಡಲೇ ತನಿಖೆ ನಡೆಸಿ, ವಿವರಗಳನ್ನು ಪಡೆದು ಕೋರ್ಟ್ಗೆ ತಿಳಿಸಿ’ ಎಂದು ಅಡ್ವೋಕೇಟ್ ಜನರಲ್ ಅವರಿಗೆ ಸೂಚಿಸಿತು.</p>.<p>‘ಫ್ಲೆಕ್ಸ್ ಸಮಸ್ಯೆ ಬಗೆಹರಿಸಲು ನನ್ನ ಬಳಿ ಕೆಲವು ಐಡಿಯಾಗಳಿವೆ. ಬೇಕಿದ್ದರೆ ಅವುಗಳನ್ನು ನೀವೂ ಬಳಸಿ ಸಮಸ್ಯೆ ಬಗೆಹರಿಸಬಹುದು. ಸೇವೆ ಕಲ್ಪಿಸಲು ನಾನು ಸಿದ್ದನಿದ್ದೇನೆ’ ಎಂಬ ಒಕ್ಕಣಿಕೆಯ ಪತ್ರವನ್ನು ಅನಾಮಧೇಯ ವ್ಯಕ್ತಿಯು ಮುಖ್ಯ ನ್ಯಾಯಮೂರ್ತಿಗಳನ್ನು ಹೆಸರಿಸಿ ರಿಜಿಸ್ಟ್ರಾರ್ ಜನರಲ್ಗೆ ಇ-ಮೇಲ್ ಕಳುಹಿಸಿದ್ದರು.</p>.<p>ನಿಲ್ಲದ ಫ್ಲೆಕ್ಸ್ ಹಾವಳಿ: ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, ‘ಕೆ.ಆರ್.ಪುರದಲ್ಲಿ ಶಾಸಕ ಭೈರತಿ ಬಸವರಾಜು ಹಾಗೂ ಸ್ಥಳೀಯ ಪಾಲಿಕೆ ಸದಸ್ಯ ಶ್ರೀಕಾಂತ್ ಅವರ ಫ್ಲೆಕ್ಸ್ಗಳನ್ನು ರಸ್ತೆಯ ಇಕ್ಕೆಲಗಳಲ್ಲಿ ಅಳವಡಿಸಲಾಗಿದೆ. ಅಂತೆಯೇ, ಇತ್ತೀಚೆಗೆ ನಿಧನರಾದ ಖ್ಯಾತ ನಟರೊಬ್ಬರ ಫ್ಲೆಕ್ಸ್ಗಳನ್ನೂ ಹಾಕಲಾಗಿದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ಮಾಹಿತಿ ನೀಡಲಾಗಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.</p>.<p>ಇದಕ್ಕೆ ಉತ್ತರಿಸಿದ ಬಿಬಿಎಂಪಿ ಪರ ವಕೀಲರು, ‘ನಗರದಲ್ಲಿ ಫ್ಲೆಕ್ಸ್ಗಳ ಉತ್ಪಾದನೆ ಹಾಗೂ ಮುದ್ರಣವನ್ನೇ ನಿಷೇಧಿಸಲಾಗಿದೆ. ಆದರೂ, ಹೊರಗಡೆಯಿಂದ ತಂದು ಹಾಕಲಾಗುತ್ತಿದೆ. ಆದಾಗ್ಯೂ, ಇವುಗಳನ್ನು ತೆರವುಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಫ್ಲೆಕ್ಸ್ ಹಾಕದಂತೆ ಏಕೆ ತಡೆಯುವುದಿಲ್ಲ. ಬಿಬಿಎಂಪಿ ಹಾಗೂ ನಗರ ಪೊಲೀಸ್ ಆಯುಕ್ತರು ಏನು ಮಾಡುತ್ತಾರೆ. ಫ್ಲೆಕ್ಸ್ ಹಾಕಿರುವ ಸ್ಥಳಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಕ್ರಮ ಜರುಗಿಸಿ’ ಎಂದು ಬಿಬಿಎಂಪಿ ಪರ ವಕೀಲರಿಗೆ ತಾಕೀತು ಮಾಡಿತು.</p>.<p><strong>ಸ್ಥಳ ತೋರಿಸಿಲ್ಲ</strong></p>.<p>ಮತ್ತೊಬ್ಬ ಅರ್ಜಿದಾರರ ಪರ ವಕೀಲ ರಮೇಶ್ಚಂದ್ರ ಅವರು, ‘ಅನಧಿಕೃತ ಫೆಕ್ಸ್ ಅಳವಡಿಕೆ ಸಂಬಂಧ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿದ ಬ್ಯಾಟರಾಯನಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ಕಾರ್ಯನಿರ್ವಹಣೆಗೆ ಅವರಿಗೆ ಯಾವುದೇ ಸ್ಥಳ ತೋರಿಸಿಲ್ಲ’ ಎಂದು ದೂರಿದರು.</p>.<p>ಇದಕ್ಕೆ ಹೊಳ್ಳ ಅವರು, ‘ಇದೊಂದು ಸಾಮಾನ್ಯ ವರ್ಗಾವಣೆ’ ಎಂದರು. ‘ಈ ಕುರಿತು ಪ್ರಮಾಣಪತ್ರ ಸಲ್ಲಿಸಿ’ ಎಂದು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 6ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಅನಧಿಕೃತ ಫ್ಲೆಕ್ಸ್ ಹಾವಳಿ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಇ–ಮೇಲ್ ಕಳುಹಿಸಿರುವ ಅನಾಮಧೇಯ ವ್ಯಕ್ತಿಯ ಬಗ್ಗೆ ಸೈಬರ್ ಪೊಲೀಸರಿಂದ ತನಿಖೆ ನಡೆಸಲು ಮುಖ್ಯ ನ್ಯಾಯಮೂರ್ತಿ ಆದೇಶಿಸಿದ್ದಾರೆ.</p>.<p>ಅನಧಿಕೃತ ಫ್ಲೆಕ್ಸ್ ಹಾವಳಿ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಈ ವಿಷಯ ಪ್ರಸ್ತಾಪಿಸಿದ ನ್ಯಾಯಪೀಠ, ‘ಒಂದು ಪ್ರಕರಣ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವಾಗ ಇ-ಮೇಲ್ ಕಳುಹಿಸುವುದು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡಿದಂತಾಗುತ್ತದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>‘ಯಾರು ಬೇಕಾದರೂ ಕೋರ್ಟ್ಗೆ ಹಾಜರಾಗಿ ತಮ್ಮ ಅಹವಾಲು ಸಲ್ಲಿಸಲು ಮುಕ್ತ ಅವಕಾಶವಿದೆ. ಆದರೆ, ಇ-ಮೇಲ್ ಕಳುಹಿಸುವುದು ಸೂಕ್ತ ಮಾರ್ಗವಲ್ಲ. ಈ ರೀತಿ ಮಾಡಿದರೆ ಕೋರ್ಟ್ಗೆ ತನ್ನ ಕೆಲಸ ನಿರ್ವಹಿಸಲು ಕಷ್ಟವಾಗುತ್ತದೆ’ ಎಂದು ಹೇಳಿತು.</p>.<p>‘ಈ ಕುರಿತು ಸೈಬರ್ ಪೊಲೀಸರಿಂದ ಕೂಡಲೇ ತನಿಖೆ ನಡೆಸಿ, ವಿವರಗಳನ್ನು ಪಡೆದು ಕೋರ್ಟ್ಗೆ ತಿಳಿಸಿ’ ಎಂದು ಅಡ್ವೋಕೇಟ್ ಜನರಲ್ ಅವರಿಗೆ ಸೂಚಿಸಿತು.</p>.<p>‘ಫ್ಲೆಕ್ಸ್ ಸಮಸ್ಯೆ ಬಗೆಹರಿಸಲು ನನ್ನ ಬಳಿ ಕೆಲವು ಐಡಿಯಾಗಳಿವೆ. ಬೇಕಿದ್ದರೆ ಅವುಗಳನ್ನು ನೀವೂ ಬಳಸಿ ಸಮಸ್ಯೆ ಬಗೆಹರಿಸಬಹುದು. ಸೇವೆ ಕಲ್ಪಿಸಲು ನಾನು ಸಿದ್ದನಿದ್ದೇನೆ’ ಎಂಬ ಒಕ್ಕಣಿಕೆಯ ಪತ್ರವನ್ನು ಅನಾಮಧೇಯ ವ್ಯಕ್ತಿಯು ಮುಖ್ಯ ನ್ಯಾಯಮೂರ್ತಿಗಳನ್ನು ಹೆಸರಿಸಿ ರಿಜಿಸ್ಟ್ರಾರ್ ಜನರಲ್ಗೆ ಇ-ಮೇಲ್ ಕಳುಹಿಸಿದ್ದರು.</p>.<p>ನಿಲ್ಲದ ಫ್ಲೆಕ್ಸ್ ಹಾವಳಿ: ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, ‘ಕೆ.ಆರ್.ಪುರದಲ್ಲಿ ಶಾಸಕ ಭೈರತಿ ಬಸವರಾಜು ಹಾಗೂ ಸ್ಥಳೀಯ ಪಾಲಿಕೆ ಸದಸ್ಯ ಶ್ರೀಕಾಂತ್ ಅವರ ಫ್ಲೆಕ್ಸ್ಗಳನ್ನು ರಸ್ತೆಯ ಇಕ್ಕೆಲಗಳಲ್ಲಿ ಅಳವಡಿಸಲಾಗಿದೆ. ಅಂತೆಯೇ, ಇತ್ತೀಚೆಗೆ ನಿಧನರಾದ ಖ್ಯಾತ ನಟರೊಬ್ಬರ ಫ್ಲೆಕ್ಸ್ಗಳನ್ನೂ ಹಾಕಲಾಗಿದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ಮಾಹಿತಿ ನೀಡಲಾಗಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.</p>.<p>ಇದಕ್ಕೆ ಉತ್ತರಿಸಿದ ಬಿಬಿಎಂಪಿ ಪರ ವಕೀಲರು, ‘ನಗರದಲ್ಲಿ ಫ್ಲೆಕ್ಸ್ಗಳ ಉತ್ಪಾದನೆ ಹಾಗೂ ಮುದ್ರಣವನ್ನೇ ನಿಷೇಧಿಸಲಾಗಿದೆ. ಆದರೂ, ಹೊರಗಡೆಯಿಂದ ತಂದು ಹಾಕಲಾಗುತ್ತಿದೆ. ಆದಾಗ್ಯೂ, ಇವುಗಳನ್ನು ತೆರವುಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಫ್ಲೆಕ್ಸ್ ಹಾಕದಂತೆ ಏಕೆ ತಡೆಯುವುದಿಲ್ಲ. ಬಿಬಿಎಂಪಿ ಹಾಗೂ ನಗರ ಪೊಲೀಸ್ ಆಯುಕ್ತರು ಏನು ಮಾಡುತ್ತಾರೆ. ಫ್ಲೆಕ್ಸ್ ಹಾಕಿರುವ ಸ್ಥಳಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಕ್ರಮ ಜರುಗಿಸಿ’ ಎಂದು ಬಿಬಿಎಂಪಿ ಪರ ವಕೀಲರಿಗೆ ತಾಕೀತು ಮಾಡಿತು.</p>.<p><strong>ಸ್ಥಳ ತೋರಿಸಿಲ್ಲ</strong></p>.<p>ಮತ್ತೊಬ್ಬ ಅರ್ಜಿದಾರರ ಪರ ವಕೀಲ ರಮೇಶ್ಚಂದ್ರ ಅವರು, ‘ಅನಧಿಕೃತ ಫೆಕ್ಸ್ ಅಳವಡಿಕೆ ಸಂಬಂಧ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿದ ಬ್ಯಾಟರಾಯನಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ಕಾರ್ಯನಿರ್ವಹಣೆಗೆ ಅವರಿಗೆ ಯಾವುದೇ ಸ್ಥಳ ತೋರಿಸಿಲ್ಲ’ ಎಂದು ದೂರಿದರು.</p>.<p>ಇದಕ್ಕೆ ಹೊಳ್ಳ ಅವರು, ‘ಇದೊಂದು ಸಾಮಾನ್ಯ ವರ್ಗಾವಣೆ’ ಎಂದರು. ‘ಈ ಕುರಿತು ಪ್ರಮಾಣಪತ್ರ ಸಲ್ಲಿಸಿ’ ಎಂದು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 6ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>