ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಗೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್‌: ಮನವಿಗಳ ಮಹಾಪೂರ

ಕಡಿಮೆ ಮೊತ್ತದ ಪರಿಹಾರ ನೀಡಿದ್ದಕ್ಕೆ ಕಾಂಗ್ರೆಸ್‌ ಆಕ್ರೋಶ: ಪ್ರತಿಭಟನೆ
Last Updated 5 ಅಕ್ಟೋಬರ್ 2019, 4:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಶನಿವಾರಅವಳಿ ನಗರ ಹುಬ್ಬಳ್ಳಿ–ಧಾರವಾಡಕ್ಕೆ ಆಗಮಿಸಿದಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸ್ಥಳೀಯ ಸಂಘಟನೆಗಳು ಹಾಗೂ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು‌.

ನೆರೆ ಪರಿಹಾರಕ್ಕೆ ಕೇಂದ್ರ ನೀಡಿರುವ ₹1200 ಕೋಟಿ ಯಾವುದಕ್ಕೂ ಸಾಲುವುದಿಲ್ಲ. ಕೂಡಲೇ ಇದನ್ನು ಹೆಚ್ಚಿಸಬೇಕು ಎಂದು ಮಾಜಿ ಸಂಸದ ಐ.ಜಿ. ಸನದಿ ಮನವಿ ಕೊಟ್ಟರು. ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಅನೇಕ ಸಮಸ್ಯೆಗಳು ಇವೆ. ಅವುಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕರ್ತರು ವಶಕ್ಕೆ: ಕಡಿಮೆ ಪರಿಹಾರ ನೀಡಿದ್ದನ್ನು ಖಂಡಿಸಿಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ನಿರ್ಮಲಾ ಸೀತಾರಾಮನ್ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದ್ದರಿಂದ ಪೊಲೀಸರು, ಕಾರ್ಯಕರ್ತರನ್ನು ವಿಮಾನ ನಿಲ್ದಾಣದ ಒಳಗೆ ಬಿಡದೆ ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT