ಹುಬ್ಬಳ್ಳಿ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಶನಿವಾರಅವಳಿ ನಗರ ಹುಬ್ಬಳ್ಳಿ–ಧಾರವಾಡಕ್ಕೆ ಆಗಮಿಸಿದಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸ್ಥಳೀಯ ಸಂಘಟನೆಗಳು ಹಾಗೂ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು.
ನೆರೆ ಪರಿಹಾರಕ್ಕೆ ಕೇಂದ್ರ ನೀಡಿರುವ ₹1200 ಕೋಟಿ ಯಾವುದಕ್ಕೂ ಸಾಲುವುದಿಲ್ಲ. ಕೂಡಲೇ ಇದನ್ನು ಹೆಚ್ಚಿಸಬೇಕು ಎಂದು ಮಾಜಿ ಸಂಸದ ಐ.ಜಿ. ಸನದಿ ಮನವಿ ಕೊಟ್ಟರು. ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಅನೇಕ ಸಮಸ್ಯೆಗಳು ಇವೆ. ಅವುಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕರ್ತರು ವಶಕ್ಕೆ: ಕಡಿಮೆ ಪರಿಹಾರ ನೀಡಿದ್ದನ್ನು ಖಂಡಿಸಿಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ನಿರ್ಮಲಾ ಸೀತಾರಾಮನ್ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದ್ದರಿಂದ ಪೊಲೀಸರು, ಕಾರ್ಯಕರ್ತರನ್ನು ವಿಮಾನ ನಿಲ್ದಾಣದ ಒಳಗೆ ಬಿಡದೆ ವಶಕ್ಕೆ ಪಡೆದರು.