ಬೆಂಗಳೂರು: ನಟ, ನಿರ್ದೇಶಕ ಉಪೇಂದ್ರ ಅವರು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿದ್ದಾರೆ.
ಗುರುವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ನಟ ಉಪೇಂದ್ರ ಅವರು, ದೇಣಿಗೆಯಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು. ಚೆಕ್ ಅನ್ನು ಮುಖ್ಯಮಂತ್ರಿ ಸ್ವೀಕರಿಸಿದರು.
ಇದಕ್ಕೂ ಹಿಂದೆ ಆಗಸ್ಟ್ 8ರಂದು ಟ್ವೀಟ್ ಮಾಡಿದ್ದ ನಟ ಉಪೇಂದ್ರ, ತಾವು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡುತ್ತಿರುವುದಾಗಿ ಘೋಷಿಸಿದ್ದರು. ಅಲ್ಲದೆ, ಸಾರ್ವಜನಿಕರೂ ಇಚ್ಚಾನುಸಾರ ನೆರವು ನೀಡಬೇಕಾಗಿ ಕೋರಿದ್ದರು.
ಖ್ಯಾತ ನಟ, ನಿರ್ದೇಶಕ ಉಪೇಂದ್ರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದರು. pic.twitter.com/vpQd9bhVqC
ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ/-ರೂ ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ. 🙏🙏 #SAVENORTHKARNATAKA#KarnatakaFloods#saveuttarakannada