2009ರಲ್ಲಿ ಕಾಮಗಾರಿ ಪ್ರಾರಂಭವಾಗಿದೆ. 50 ವರ್ಷದ ಹೋರಾಟದ ಪ್ರತಿಫಲವಾಗಿ ಈ ಯೋಜನೆ ಸಿಕ್ಕಿದೆ. ಯಡಿಯೂರಪ್ಪ ಯೋಜನೆಗೆ ಚಾಲನೆ ನೀಡಿ, ಅನುದಾನ ಬಿಡುಗಡೆ ಮಾಡಿದ್ದರು. ಆದರೆ, 2013ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇವಲ ₹300 ಕೋಟಿ ಬಿಡುಗಡೆ ಮಾಡಿ ಯೋಜನೆ ವಿಳಂಬ ಆಗುವಂತೆ ನೋಡಿಕೊಂಡಿದೆ ಎಂದು ಆರೋಪಿಸಿದರು.