ಮೊದಲೇ ನಿರ್ಧರಿಸಿದಂತೆ, ಜಿಲ್ಲಾ ವಿಶ್ವಕರ್ಮ ಸಮಾಜವು ಮಾಣಿಕಪ್ರಭು ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿತು. ಇದರೊಂದಿಗೆ ಜೈನ್ ಸಮಾಜದ ಮಹಿಳೆಯರು, ಅಲ್ಪಸಂಖ್ಯಾತರ ಸಮಯದಾಯದ ಮಹಿಳೆಯರು, ಎಐಡಿಎಸ್ಒ, ಎಸ್ಎಫ್ಐ, ಎಐಡಿವೈಒ ಹಾಗೂ ಎಬಿವಿಪಿ ಹಾಗೂ ಯುವ ಕಾಂಗ್ರೆಸ್ ಸೇರಿದಂತೆ ಅನೇಕ ಸಂಘಟನೆಗಳು ಮೆರವಣಿಗೆ ನಡೆಸಿದವು.