‘ಕೆಲ ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರಿಗೆ, ಇತ್ತೀಚೆಗೆ ರೋಗ ಉಲ್ಬಣಗೊಂಡಿತ್ತು. ಪತ್ನಿ ಕಳೆದ ವರ್ಷ ಮೃತಪಟ್ಟಿದ್ದರು. ತನಗೆ ಬಂದಿರುವ ಕಾಯಿಲೆಯಿಂದ ಕುಟುಂಬದ ಸದಸ್ಯರಿಗೆ ತೊಂದರೆಯಾಗಬಾರದು ಎಂಬ ಭಾವನೆ ಅವರಲ್ಲಿತ್ತು. ವ್ಯಕ್ತಿ ತನ್ನ ಕ್ರಿಯಾಕರ್ಮಗಳನ್ನು ತಾನೇ ಮಾಡಿಕೊಂಡು ಮೃತಪಟ್ಟರೆ, ಮುಕ್ತಿ ಸಿಗುವುದು ಎಂಬ ನಂಬಿಕೆಯನ್ನು ಅವರು ಹೊಂದಿದ್ದರು. ಹೀಗಾಗಿ, ಕಟ್ಟಿಗೆಗಳನ್ನು ಪೇರಿಸಿಟ್ಟು, ಶಾಸ್ತ್ರೋಕ್ತ ಕ್ರಿಯಾಕರ್ಮ ಮಾಡಿ, ಸೀಮೆಎಣ್ಣೆ ಸುರಿದುಕೊಂಡು, ಕಟ್ಟಿಗೆ ರಾಶಿಗೆ ಅವರೇ ಬೆಂಕಿ ಹಚ್ಚಿಕೊಂಡಿರಬಹುದು’ ಎಂದು ಕುಟುಂಬಸ್ಥರು ಅಂದಾಜಿಸಿದ್ದಾರೆ.