ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಮುಖ ಹುದ್ದೆಗಳಿಗೆ ಉತ್ತರಕರ್ನಾಟಕದ ಕಾಂಗ್ರೆಸ್‌ ಶಾಸಕರ ಪಟ್ಟು

Last Updated 13 ಡಿಸೆಂಬರ್ 2018, 20:00 IST
ಅಕ್ಷರ ಗಾತ್ರ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಆಗಿರುವ ಅನ್ಯಾಯ ನಿವಾರಣೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಉಪ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಮಂಡಿಸಲು ಉತ್ತರ ಕರ್ನಾಟಕದ ಕಾಂಗ್ರೆಸ್‌ ಶಾಸಕರು ತೀರ್ಮಾನಿಸಿದ್ದಾರೆ.

ಗುರುವಾರ ಶಾಸಕರಾದ ಸತೀಶ್‌ ಜಾರಕಿಹೊಳಿ, ಎಂ.ಬಿ.ಪಾಟೀಲ, ಎಸ್‌.ಆರ್‌.ಪಾಟೀಲ ಮತ್ತು ಇತರ ಶಾಸಕರು ಈ ಸಂಬಂಧ ಚರ್ಚೆ ನಡೆಸಿದರು.

ವಿಧಾನಪರಿಷತ್‌ ಸಭಾಪತಿ ಸ್ಥಾನವನ್ನೂ ಉತ್ತರಕರ್ನಾಟಕ ಭಾಗದ ಎಸ್‌.ಆರ್‌.ಪಾಟೀಲ ಅವರಿಗೆ ಕೊಡದೇ ವಂಚಿಸಲಾಗಿದೆ. ಪಕ್ಷ ಮತ್ತು ಸರ್ಕಾರದಲ್ಲಿ ಎಲ್ಲ ಪ್ರಮುಖ ಹುದ್ದೆಗಳೂ ದಕ್ಷಿಣ ಕರ್ನಾಟಕದವರ ಪಾಲಾಗಿದೆ. ಇದರಿಂದ ಉತ್ತರ ಕರ್ನಾಟಕದ ಶಾಸಕರಿಗೆ ಅನ್ಯಾಯವಾಗಿದೆ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT