‘ನೆರೆಯಿಂದಾಗಿ ಇಡೀ ಉತ್ತರ ಕರ್ನಾಟಕವೇ ಮುಳುಗಿ ಹೋಗಿದೆ. ಜನರು ಸಂಕಷ್ಟದಲ್ಲಿದ್ದಾರೆ. ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಚರ್ಚಿಸುವುದಕ್ಕಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಬೇಕಿತ್ತು. ಸರ್ಕಾರ ಇನ್ನಾದರೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಬೆಂಗಳೂರಲ್ಲಿ ಅಧಿವೇಶನ ಆರಂಭದ ದಿನವಾದ ಅ.14ರಂದು ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಕುರಿಗಳನ್ನು ನುಗ್ಗಿಸಿ ‘ಕುರಿ ಸಮ್ಮೇಳನ’ ಮಾಡಲಾಗುವುದು’ ಎಂದು ತಿಳಿಸಿದರು.