ಹೆಸರಘಟ್ಟ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಅವರ ಪರವಾಗಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಐವರಕಂಡಪುರ, ಕೊಡಗಿ ತಿರುಮಲಾಪುರ, ಹೆಸರಘಟ್ಟ, ತೊರೆ ನಾಗಚಂದ್ರ ಗ್ರಾಮಗಳಲ್ಲಿ ಮತಯಾಚಿಸಿದರು.
ಬಳಿಕ ಮಾತನಾಡಿದ ಅವರು ‘ಎತ್ತಿನಹೊಳೆ ಯೋಜನೆಗೆ ಬಿಜೆಪಿ ಅನುಮೋದನೆ ನೀಡಿತ್ತು. ಮುಖ್ಯಮಂತ್ರಿಯಾಗಿದ್ದ ಸದಾನಂದ ಗೌಡರು ಇದಕ್ಕೆ ₹6,000 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಆದರೆ, ವೀರಪ್ಪ ಮೊಯಿಲಿ ಅವರು ಯೋಜನೆಯನ್ನು ‘ನಾನೇ ಮಾಡಿದ್ದು’ ಎಂದು ಸುಳ್ಳು ಹೇಳಿ ಜನರಿಗೆ ಟೋಪಿ ಹಾಕುತ್ತಿದ್ದಾರೆ’ ಎಂದರು.