ನೂತನಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸುವುದು. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವುದು. ಕೇಂದ್ರ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ವೀರಶೈವ ಲಿಂಗಾಯತರಿಗೆ ‘ಒಬಿಸಿ’ ಮೀಸಲಾತಿ ಸೌಲಭ್ಯ ಕಲ್ಪಿಸುವುದು. ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನಾಗರಿಕ ನಿವೇಶನಕ್ಕಾಗಿ ಅನುದಾನ ನೀಡುವುದು. ಲಿಂಗೈಕ್ಯರಾದ ಸಿದ್ಧಗಂಗಾ ಶ್ರೀಗಳಿಗೆ ‘ಭಾರತ ರತ್ನ’ ಪುರಸ್ಕಾರ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವುದು. ರಾಜ್ಯದ ಅನುದಾನಿತ ಸಂಸ್ಥೆಗಳಲ್ಲಿ 10– 15 ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು. 1995ರ ನಂತರ ಸ್ಥಾಪನೆಗೊಂಡ ಶಿಕ್ಷಣ ಸಂಸ್ಥೆಗಳಿಗೆ ಸಹಾಯಾನುದಾನ ನೀಡುವಂತೆ ಮನವಿ ಒಪ್ಪಿಸಿದರು.