ಬಲ್ಲಿಯಾ : ‘ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಹಿಂದೂದೇವರ ವಿರುದ್ಧ ಸಾಮಾಜಿಕ ಜಾಲತಾಣ
ಗಳಲ್ಲಿ ಅವಹೇಳನಕಾರಿ ಬರಹ ಬರೆದ ನಾಲ್ಕು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ನಾಲ್ವರು ಆರೋಪಿಗಳು ಹಿಂದೂದೇವರು, ಪ್ರಧಾನಿ ಹಾಗೂ ಮುಖ್ಯಮಂತ್ರಿ ವಿರುದ್ಧ ಫೇಸ್ಬುಕ್, ವಾಟ್ಸ್ಆ್ಯಪ್ನಲ್ಲಿ ಅವಹೇಳನಕಾರಿ ಬರಹ ಬರೆದಿದ್ದರು. ಈ ಬಗ್ಗೆ ಬಿಜೆಪಿ ನಾಯಕ ಧರಮ್ ದೇವ್ ಸಿಂಗ್ ದೂರು ನೀಡಿದ್ದರು’ ಸ್ಥಳೀಯ ಠಾಣಾಧಿಕಾರಿ ಜಗದೀಶ್ ಪ್ರಸಾದ್ ತಿಳಿಸಿದ್ದಾರೆ.