ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕುಲಪತಿ ಎದುರಾದರೆ ತಲೆ ತಗ್ಗಿಸುವ ಸ್ಥಿತಿ ಇದೆ’

ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ
Last Updated 17 ಸೆಪ್ಟೆಂಬರ್ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ಕುಲಪತಿ ನೇಮಕಾತಿಯಲ್ಲಿ ಕೇಳಿ ಬರುತ್ತಿರುವ ಅಕ್ರಮ, ಭ್ರಷ್ಟಾಚಾರದಿಂದಾಗಿ ಈ ಹುದ್ದೆಯ ಗೌರವ ಕಡಿಮೆಯಾಗಿದ್ದು, ಕುಲಪತಿಗಳು ಎದುರು ಬಂದರೆ ತಲೆ ತಗ್ಗಿಸಿ ನಿಲ್ಲುವ ಪರಿಸ್ಥಿತಿ ಇದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

ವಿವಿಧ ವಿ.ವಿ.ಗಳ ಕುಲಪತಿಗಳು ಮತ್ತು ಕುಲಸಚಿವರಿಗೆ ರೇಟಿಂಗ್ ಪ್ರಮಾಣಪತ್ರ ನೀಡಿ ಮಾತನಾಡಿದ ಅವರು,‘ವಿಶ್ವವಿದ್ಯಾಲಯಗಳ ಕುಲಪತಿ ಎಂದರೆ ಅಪಾರ ಗೌರವದ ಹುದ್ದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಆ ಗೌರವವನ್ನೇ ಕಳೆದುಕೊಂಡಿದೆ. ಈ ಪರಿಸ್ಥಿತಿ ಬದಲಾವಣೆಗೆ‍ಪಾರದರ್ಶಕ ವ್ಯವಸ್ಥೆ ತರುವುದು ನಿಶ್ಚಿತ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT