ಶುಕ್ರವಾರ ಜೆಡಿಎಸ್ನ ಬಸವರಾಜ ಹೊರಟ್ಟಿ ಅವರು ಸಂವಿಧಾನ ಕುರಿತು ಭಾಷಣ ಮಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಅವರು, ‘ಲಕ್ಷಾಂತರ ರೂಪಾಯಿ ಸಂಬಳ ಪಡೆಯುವ ಸರ್ಕಾರಿ ಸಿಬ್ಬಂದಿಯೇ ಮತಕ್ಕಾಗಿ ತಮ್ಮನ್ನು ಮಾರಿಕೊಂಡರೆ, ಅದೂ ತಮಗೆ ಉಪಕಾರ ಮಾಡಿದವನನ್ನೇ ಮರೆತು ದುಡ್ಡು ಕೇಳಿದರೆ ಏನೆನ್ನಬೇಕು, ನಮ್ಮ ಸ್ಥಿತಿ ಎಲ್ಲಿಗೆ ತಲುಪಿದೆ?’ ಎಂದರು.