ವಿಧಾನ ಪರಿಷತ್ನಲ್ಲಿಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಘುನಾಥ ರಾವ್ ಮಲ್ಕಾಪುರೆ ವಿಷಯ ಪ್ರಸ್ತಾಪಿಸಿ, ₹ 284 ಕೋಟಿ ಬಡ್ಡಿ ನುಂಗಿ ಹಾಕಿದ ಈ ಹಗರಣದಲ್ಲಿ ಇಲಾಖೆಯ ಅಧಿಕಾರಿಗಳ ಜತೆಗೆ ಬ್ಯಾಂಕ್ ಅಧಿಕಾರಿಗಳು, ತನಿಖಾ ಅಧಿಕಾರಿಗಳೂ ಶಾಮೀಲಾಗಿರುವ ಶಂಕೆ ಇದೆ, ಸದನ ಸಮಿತಿಯಿಂದ ತನಿಖೆ ನಡೆಸಿದರಷ್ಟೇ ಸತ್ಯ ಹೊರಬರಬಹುದು ಎಂದು ಒತ್ತಾಯಿಸಿದರು. ಪಕ್ಷಭೇದ ಮರೆತು ಎಲ್ಲ ಸದಸ್ಯರೂ ಇದಕ್ಕೆ ದನಿಗೂಡಿಸಿದರು. ಸದನ ಸಮಿತಿ ರಚಿಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಕಟಿಸಿದರು.