ಸಂಗೀತ ಮನೆತನದಲ್ಲಿ ಬೆಳೆದ ಅವರು, ವಿದ್ವಾನ್ ಪಾಲ್ಗಾಟ್ ಸಿ.ಕೆ. ಅಯ್ಯಾಮಣಿ ಅಯ್ಯರ್ ಅವರ ಶಿಷ್ಯರಾಗಿ 10ನೇ ವಯಸ್ಸಿನಿಂದಲೇ ಕಲಾಸೇವೆ ಪ್ರಾರಂಭಿಸಿದರು. ಆಕಾಶವಾಣಿ ಮತ್ತು ದೂರದರರ್ಶನದ ಎ ದರ್ಜೆಯ ಕಲಾವಿದರಾಗಿದ್ದರು. ಕರ್ನಾಟಕ ಕಾಲೇಜ್ ಆಫ್ ಪರ್ಕ್ಯೂಷನ್ ಸಂಸ್ಥೆಯನ್ನು ಸ್ಥಾಪಿಸಿ, ಐದು ದಶಕಗಳಿಂದ ನೂರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಇವರು ವಿಶ್ವದಾದ್ಯಂತ ಸಂಗೀತ ಕಚೇರಿಗಳನ್ನು ನೀಡಿದ್ದರು. ಚೆಂಬೈ ವೈದ್ಯನಾಥ ಭಾಗವತರು, ಡಾ.ಶೆಮ್ಮಗುಂಡಿ ಶ್ರೀನಿವಸ್ ಅಯ್ಯರ್, ಡಾ.ಎಂ.ಎಸ್.ಸುಬ್ಬಲಕ್ಷ್ಮಿ, ಡಿ.ಕೆ. ಪಟ್ಟಮ್ಮಾಳ್, ಡಾ. ವಸಂತಕುಮಾರಿ, ಡಾ. ಬಾಲಮುರುಳಿಕೃಷ್ಣ ಸೇರಿದಂತೆ ಹಲವು ಸಂಗೀತ ದಿಗ್ಗಜರಿಗೆ ಮೃದಂಗದಲ್ಲಿ ಪಕ್ಕ ವಾದ್ಯ ನೀಡಿದ್ದರು.