ಪವಿತ್ರ 2028ರ ಜುಲೈ ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದು, ಐದು ವರ್ಷಗಳ ಅವಧಿಗೆ ವಾರ್ಷಿಕ ವೇತನ ಬಡ್ತಿ ನೀಡಬಾರದು. ಗೌಡಯ್ಯ 2022ರ ಫೆಬ್ರುವರಿಯಲ್ಲಿ ನಿವೃತ್ತಿ ಆಗಲಿದ್ದು, ಮೂರು ವರ್ಷ ವಾರ್ಷಿಕ ಬಡ್ತಿ ಕೊಡಬಾರದು, ಆನಂತರ ಎರಡು ವರ್ಷ ಪಿಂಚಣಿಯಲ್ಲಿ ಶೇ 25ರಷ್ಟು ಹಣಕ್ಕೆ ಕತ್ತರಿ ಹಾಕಬೇಕು ಎಂದು ತಿಳಿಸಲಾಗಿದೆ. ಈಗಾಗಲೇ ನಿವೃತ್ತರಾಗಿರುವ ಕೆ. ಶಿವಕುಮಾರ್, ಎಂ.ಎಸ್. ಸತೀಶ್, ಆರ್.ವಿ. ನರಸೇಗೌಡ ಮತ್ತು ಸಿ. ವಿರೂಪಾಕ್ಷಪ್ಪ ಅವರಿಗೆ ನೀಡುವ ಪಿಂಚಣಿಯಲ್ಲಿ ಶೇ 25ರಷ್ಟು ಹಣವನ್ನು ಐದು ವರ್ಷಗಳವರೆಗೆ ಕಡಿತಗೊಳಿಸುವಂತೆ ಹೇಳಲಾಗಿದೆ.