‘ನನ್ನ ವೈಯಕ್ತಿಕ ಜೀವನ, ನನ್ನ ಆರ್ಥಿಕ ಪರಿಸ್ಥಿತಿ ಎಲ್ಲ ವಿಚಾರಗಳನ್ನು ‘ಹಳ್ಳಿ ಹಕ್ಕಿ’ ಪುಸ್ತಕದಲ್ಲಿ ದಾಖಲಿಸಿದ್ದೇನೆ. ನನ್ನ ಚಾರಿತ್ರ್ಯ ಹರಣ ಮಾಡುವ ಪ್ರಯತ್ನ ಮಾಡಲಾಗಿದೆ. ಇಂತಹದನ್ನು ಬೇಕಾದಷ್ಟು ನೋಡಿದ್ದೇವೆ. ಇದಕ್ಕೆಲ್ಲ ಬೆದರುವುದಿಲ್ಲ. ಸಚಿವ ಸ್ಥಾನ ಸೇರಿದಂತೆ ಯಾವುದೇ ಆಮಿಷಕ್ಕೆ ನಾನು ಒಪ್ಪದ ಕಾರಣ ಈ ಹೊಸ ಪ್ರಯೋಗವನ್ನು ಮಾಡಲಾಗಿದೆ. ಇಂತಹ ಕುತಂತ್ರಗಳು ಫಲ ನೀಡುವುದಿಲ್ಲ,’ ಎಂದೂ ಅವರು ಹೇಳಿದ್ದಾರೆ.