ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನೇಶ್‌ ಗುಂಡೂರಾವ್‌ ಬಫೂನ್‌ ರೀತಿ ವರ್ತಿಸುತ್ತಿದ್ದಾರೆ : ಎಚ್‌.ವಿಶ್ವನಾಥ್‌

Last Updated 25 ನವೆಂಬರ್ 2019, 9:59 IST
ಅಕ್ಷರ ಗಾತ್ರ

ಹುಣಸೂರು: ‘ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಟೀಕೆಗಳನ್ನು ಸಹಿಸಿಕೊಳ್ಳುವ ಸಾಮರ್ಥ್ಯ ಹೊಂದಿಲ್ಲ. ಅವರು ಬಫೂನ್‌ ರೀತಿ ವರ್ತಿಸುತ್ತಿದ್ದಾರೆ’ ಎಂದು ಅಡಗೂರು ಎಚ್‌.ವಿಶ್ವನಾಥ್‌ ಆರೋಪಿಸಿದರು.

ತಾಲ್ಲೂಕಿನ ಕುಪ್ಪೆ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ‘ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಓಲೈಸಿಕೊಳ್ಳಲು ವಿಶ್ವನಾಥ್‌ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ದಿನೇಶ್‌ ಗುಂಡೂರಾವ್‌ ಅವರು ಹೇಳಿದ್ದಾರೆ. ಆದರೆ, ನಾನು ಓಲೈಕೆ ರಾಜಕಾರಣ ಮಾಡುತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೀಡಿರುವ ಕೆಲ ಒಳ್ಳೆಯ ಕಾರ್ಯಕ್ರಮಗಳ ಬಗ್ಗೆ ಹೊಗಳಿದ್ದೇನೆ. ಹಾಗೆಯೇ ಕೆಟ್ಟ ಕೆಲಸ ಮಾಡಿದಾಗ ಟೀಕಿಸಿದ್ದೇನೆ. ಅಲ್ಲದೆ, ಸಿದ್ದರಾಮಯ್ಯ ಭ್ರಷ್ಟಾಚಾರವನ್ನೂ ಮಾಡಿದ್ದಾರೆ’ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ಯೋಗಾನಂದ ಕುಮಾರ್‌ ಮತ್ತು ಪಕ್ಷದ ಮುಖಂಡರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT