ತಾಲ್ಲೂಕಿನ ಕುಪ್ಪೆ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ‘ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಓಲೈಸಿಕೊಳ್ಳಲು ವಿಶ್ವನಾಥ್ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಆದರೆ, ನಾನು ಓಲೈಕೆ ರಾಜಕಾರಣ ಮಾಡುತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೀಡಿರುವ ಕೆಲ ಒಳ್ಳೆಯ ಕಾರ್ಯಕ್ರಮಗಳ ಬಗ್ಗೆ ಹೊಗಳಿದ್ದೇನೆ. ಹಾಗೆಯೇ ಕೆಟ್ಟ ಕೆಲಸ ಮಾಡಿದಾಗ ಟೀಕಿಸಿದ್ದೇನೆ. ಅಲ್ಲದೆ, ಸಿದ್ದರಾಮಯ್ಯ ಭ್ರಷ್ಟಾಚಾರವನ್ನೂ ಮಾಡಿದ್ದಾರೆ’ ಎಂದು ಆರೋಪಿಸಿದರು.