‘ದೆಹಲಿ ಮುಖ್ಯಮಂತ್ರಿ ತಮ್ಮ ರಾಜ್ಯದ ಜನತೆಗೆ ವಿದ್ಯುತ್, ನೀರು ಹಾಗೂ ಸಾರಿಗೆ ಉಚಿತವಾಗಿ ನೀಡಿದ್ದಾರೆ. ಇಂಥ ಕೆಲಸಗಳತ್ತ ನಮ್ಮ ರಾಜ್ಯ ಸರ್ಕಾರವು ಗಮನಹರಿಸಬೇಕು.ರಾಜ್ಯದ ಮತ್ತು ರಾಷ್ಟ್ರದ ಆರ್ಥಿಕ ಸ್ಥಿತಿ ನೋಡಿ ನಮ್ಮ ರಾಜ್ಯದ ಬಜೆಟ್ ವಿಶ್ಲೇಷಿಸಬೇಕಿದೆ. ರಾಜ್ಯ ಸರ್ಕಾರ ₹2.5 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡಿದ್ದು, ಇದರಲ್ಲಿ ₹1.5 ಲಕ್ಷ ಕೋಟಿ ಸಾಲವಿದೆ. ಈ ಸಾಲಕ್ಕೆ ಬಡ್ಡಿ ಕಟ್ಟಲು ಸಾಧ್ಯವೇ? ಒಂದೆಡೆ ಸಾಲದ ತೂಕ ಜಾಸ್ತಿ ಆಗುತ್ತಿದ್ದರೆ, ಇನ್ನೊಂದೆಡೆ ಬಜೆಟ್ ತೂಕವೂ ಜಾಸ್ತಿ ಆಗಿದೆ’ ಎಂದರು.