ಆಪರೇಷನ್ ಕಮಲ ಆಡಿಯೋ ಪ್ರಕರಣದ ಸಮಗ್ರ ತನಿಖೆ ನಡೆಯಬೇಕು. ಸತ್ಯಾಂಶ ಏನೆಂಬುದು ಜನರಿಗೆ ತಿಳಿಯಬೇಕು. ಈ ಬಗ್ಗೆ ಈಗಲೇ ತೀರ್ಮಾನಕ್ಕೆ ಬರಲಾಗುವುದಿಲ್ಲ. ರಾಜಕೀಯ ಪಕ್ಷಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ರೆಸಾರ್ಟ್ಗಳಿಗೆ ಶಾಸಕರನ್ನು ಕರೆದೊಯ್ಯುವುದು, ಆಡಿಯೋ ರೆಕಾರ್ಡಿಂಗ್ನಂತಹ ವಿಚಾರಗಳಿಗೆ ರಾಜಕೀಯ ನಾಯಕರು ಹೆಚ್ಚು ಗಮನ ನೀಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಬೇಸರ ವ್ಯಕ್ತಪಡಿಸಿದರು.