ಮಂಗಳವಾರ ಬೆಳಗ್ಗೆ 11.30ರ ಸುಮಾರಿನಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಗೇರಿ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಆಯ್ಕೆಯನ್ನು ಬುಧವಾರಸದನದಲ್ಲಿ ಪ್ರಕಟಿಸಲಾಯಿತು. ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತು ಅವರು ಕಾರ್ಯಾರಂಭ ಮಾಡಿದರು.
ಮಾಜಿ ಸ್ಪೀಕರ್ ಬೋಪಯ್ಯ ಅವರನ್ನೇ ಈ ಬಾರಿಯೂ ಸ್ಪೀಕರ್ ಮಾಡಲು ಬಿಜೆಪಿ ಉದ್ದೇಶಿಸಿದೆ ಎಂದು ಸುದ್ದಿ ಹರಿದಾಡಿತ್ತು. ಆದರೆ, ಅಂತಿಮವಾಗಿ ಕಾಗೇರಿ ಅವರನ್ನು ಬಿಜೆಪಿ ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಿಕೊಂಡಿದೆ. ಬೋಪಯ್ಯ ಅವರ ಹೆಸರನ್ನು ಜೆ.ಪಿ ನಡ್ಡಾ ತಿರಸ್ಕರಿಸಿದ್ದರು ಎನ್ನಲಾಗಿದೆ.