ಬೆಂಗಳೂರು: ಆಂಧ್ರ ಪ್ರದೇಶದ ವಿಶಾಖಪಟ್ಟಣದ ಸಮೀಪ ವಿಷಾನಿಲ ಸೋರಿಕೆ ಪ್ರಕರಣದಿಂದ ಅಪಾರ ಸಾವು- ನೋವು ಉಂಟಾಗಿರುವುದು ತೀರಾ ದುರ್ದೈವದ ಸಂಗತಿಯಾಗಿದೆ. ಈ ಘಟನೆಯಿಂದನೊಂದವರಿಗೆ ನನ್ನ ಸಾಂತ್ವನಗಳು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಘಟನೆ ಸಂಭವಿಸಿದ ಪ್ರದೇಶದಲ್ಲಿ ಕರ್ನಾಟಕದಿಂದ ತೆರಳಿದವರು ಯಾರಾದರೂ ಸಿಲುಕಿಕೊಂಡಿದ್ದಾರೆಯೇ ಎಂದು ಪತ್ತೆ ಮಾಡಲು ಮತ್ತು ಅವರಿಗೆ ತಕ್ಷಣಕ್ಕೆ ಸೂಕ್ತ ಮಾಹಿತಿ - ಸಹಾಯ ಒದಗಿಸುವ ಉದ್ದೇಶದಿಂದ ನನ್ನ ಉಸ್ತುವಾರಿ ಜಿಲ್ಲೆಯಾದ ರಾಯಚೂರು ಜಿಲ್ಲಾಡಳಿತದ ಮೂಲಕ ಸಹಾಯವಾಣಿ ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಸಹಾಯವಾಣಿಯ ಸಂಖ್ಯೆ 08532-228559 ಮತ್ತು 8660761866 ಆಗಿರುತ್ತದೆ. ಸಂತ್ರಸ್ತರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.