ಮೈತ್ರಿಕೂಟದ ಶಾಸಕರ ಭಿನ್ನಮತೀಯ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಿಎಂ ಎಚ್ಡಿಕೆ ತಾವು ವಿಶ್ವಾಸ ಮತಯಾಚನೆ ಮಾಡುವುದಾಗಿ ಶುಕ್ರವಾರ ಸದನದಲ್ಲಿ ಘೋಷಿಸಿದ್ದರು. ಇದಕ್ಕೆ ಆರಂಭದಲ್ಲಿ ಬಿಜೆಪಿ ವಿರೋಧಿಸಿತ್ತಾದರೂ, ಸೋಮವಾರ ಸ್ವತಃ ಬಿಜೆಪಿ ನಾಯಕರೇ ಅವಿಶ್ವಾಸ ಮಂಡನೆಗೆ ಸ್ಪೀಕರ್ ಬಳಿ ನೋಟಿಸ್ ನೀಡಿದರು. ಅದರಂತೆ ಸಿಎಂ ಎಚ್ಡಿಕೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ,ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಅವರನ್ನು ಒಳಗೊಂಡ ಕಲಾಪ ಸಲಹಾ ಸಮಿತಿ ಸಭೆ ನಡೆಯಿತು. ಗುರುವಾರ ಬೆಳಗ್ಗೆ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡಬೇಕು ಎಂದುಒಂದು ತಾಸಿನ ಈ ಸಭೆಯಲ್ಲಿ ತೀರ್ಮಾನವಾಯಿತು.