<p><strong>ಚಿತ್ರದುರ್ಗ: </strong>‘ಮುಖ್ಯಮಂತ್ರಿ ಯಡಿಯೂರಪ್ಪನವರೇ ಬಿಜೆಪಿಯ ಹೈಕಮಾಂಡ್ ಸಂಸ್ಕೃತಿ ವಿರುದ್ಧ ಸಿಡಿದೇಳುವ ಮೂಲಕ ರಾಜ್ಯದ ಜನತೆಯ ಹಿತ ಕಾಯುವ ನಿಟ್ಟಿನಲ್ಲಿ ಕೆಲಸ ಮಾಡಿ’ ಎಂದುಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಸಲಹೆ ನೀಡಿದರು.</p>.<p>‘ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯಬೇಕು ಎಂಬ ಸಂಚು ಒಳಗೊಳಗೆ ನಡೆಯುತ್ತಿದೆ. ಕೂಡಲೇ ಎಚ್ಚೆತ್ತುಕೊಂಡು ಜನಪರ ಆಡಳಿತ ನೀಡಿ.ಇಲ್ಲದಿದ್ದರೆ, ನಿಷ್ಪ್ರಯೋಜಕ ಮುಖ್ಯಮಂತ್ರಿ ಎಂಬ ಕಪ್ಪುಪಟ್ಟಿಗೆ ಸೇರಲಿದ್ದೀರಿ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳ ಮಾತಿಗೂ ಬೆಲೆ ನೀಡದ ಪ್ರಧಾನಿ ಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ ದಪ್ಪ ಚರ್ಮದವರು. ನೋಟು ಅಮಾನ್ಯೀಕರಣದಿಂದ ಈವರೆಗೂ ಇವರು ಕೈಗೊಂಡ ಕೆಲಸಗಳೆಲ್ಲವೂ ಭಸ್ಮವಾಗುತ್ತಿದ್ದು, ಇಬ್ಬರು ದೇಶಕ್ಕೆ ಆಧುನಿಕ ಭಸ್ಮಾಸುರರಾಗಿದ್ದಾರೆ’ ಎಂದು ಪುನರುಚ್ಚರಿಸಿದರು.</p>.<p>‘ಮೋದಿ ಆಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ಡೋಲಾಯಮಾನ ಆಗಿದ್ದು, ದಿವಾಳಿಯತ್ತ ಸಾಗುತ್ತಿದೆ. ಇದನ್ನು ಚೇತರಿಕೆಯತ್ತ ಕೊಂಡೊಯ್ಯುವ ಬದಲು ಸಿಎಎ ಮತ್ತು ಎನ್ಆರ್ಸಿ ಕುರಿತು ಬಿಜೆಪಿಯಿಂದ ಮನೆಮನೆ ಅಭಿಯಾನ ಕೈಗೊಂಡಿದ್ದಾರೆ. ಇದು ಹೀಗೆ ಮುಂದುವರೆದರೆ ಬಿಜೆಪಿ ಮುಕ್ತ ಭಾರತ ನಿರ್ಮಾಣವಾಗಲಿದೆ’ ಎಂದು ಹೇಳಿದರು.</p>.<p>‘ದೇಶದಲ್ಲಿ ಕೈಗಾರಿಕಾಭಿವೃದ್ಧಿ, ಉದ್ಯೋಗ ಸೃಷ್ಟಿ, ಹಸಿವು ಮುಕ್ತ ಭಾರತ ನಿರ್ಮಾಣ, ಆರ್ಥಿಕ ಪ್ರಗತಿಯತ್ತ ಚಿಂತಿಸುವ ಬದಲು ಮೋದಿ, ಅಮಿತ್ ಶಾ ಒಡೆದಾಳುವ ನೀತಿಗೆ ಮುಂದಾಗಿದ್ದಾರೆ’ ಎಂದು ದೂರಿದರು.</p>.<p>ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ, ‘ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ಗೆ ಮಾರಾಟ ಮಾಡಿದ್ದಾರೆ. ದೇಶದ ಬೊಕ್ಕಸಕ್ಕೆ ಲಾಭ ತಂದುಕೊಡುವಂಥ ಸಂಸ್ಥೆಗಳೆಲ್ಲವನ್ನೂ ಅದಾನಿ, ಅಂಬಾನಿ ಕಂಪನಿಗೆ ಮಾರಾಟ ಮಾಡಿದರೂ ಅಚ್ಚರಿ ಇಲ್ಲ. ಈ ಕುರಿತು ರಾಜ್ಯದ ಜನ ಜಾಗೃತರಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ಮುಖ್ಯಮಂತ್ರಿ ಯಡಿಯೂರಪ್ಪನವರೇ ಬಿಜೆಪಿಯ ಹೈಕಮಾಂಡ್ ಸಂಸ್ಕೃತಿ ವಿರುದ್ಧ ಸಿಡಿದೇಳುವ ಮೂಲಕ ರಾಜ್ಯದ ಜನತೆಯ ಹಿತ ಕಾಯುವ ನಿಟ್ಟಿನಲ್ಲಿ ಕೆಲಸ ಮಾಡಿ’ ಎಂದುಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಸಲಹೆ ನೀಡಿದರು.</p>.<p>‘ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯಬೇಕು ಎಂಬ ಸಂಚು ಒಳಗೊಳಗೆ ನಡೆಯುತ್ತಿದೆ. ಕೂಡಲೇ ಎಚ್ಚೆತ್ತುಕೊಂಡು ಜನಪರ ಆಡಳಿತ ನೀಡಿ.ಇಲ್ಲದಿದ್ದರೆ, ನಿಷ್ಪ್ರಯೋಜಕ ಮುಖ್ಯಮಂತ್ರಿ ಎಂಬ ಕಪ್ಪುಪಟ್ಟಿಗೆ ಸೇರಲಿದ್ದೀರಿ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳ ಮಾತಿಗೂ ಬೆಲೆ ನೀಡದ ಪ್ರಧಾನಿ ಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ ದಪ್ಪ ಚರ್ಮದವರು. ನೋಟು ಅಮಾನ್ಯೀಕರಣದಿಂದ ಈವರೆಗೂ ಇವರು ಕೈಗೊಂಡ ಕೆಲಸಗಳೆಲ್ಲವೂ ಭಸ್ಮವಾಗುತ್ತಿದ್ದು, ಇಬ್ಬರು ದೇಶಕ್ಕೆ ಆಧುನಿಕ ಭಸ್ಮಾಸುರರಾಗಿದ್ದಾರೆ’ ಎಂದು ಪುನರುಚ್ಚರಿಸಿದರು.</p>.<p>‘ಮೋದಿ ಆಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ಡೋಲಾಯಮಾನ ಆಗಿದ್ದು, ದಿವಾಳಿಯತ್ತ ಸಾಗುತ್ತಿದೆ. ಇದನ್ನು ಚೇತರಿಕೆಯತ್ತ ಕೊಂಡೊಯ್ಯುವ ಬದಲು ಸಿಎಎ ಮತ್ತು ಎನ್ಆರ್ಸಿ ಕುರಿತು ಬಿಜೆಪಿಯಿಂದ ಮನೆಮನೆ ಅಭಿಯಾನ ಕೈಗೊಂಡಿದ್ದಾರೆ. ಇದು ಹೀಗೆ ಮುಂದುವರೆದರೆ ಬಿಜೆಪಿ ಮುಕ್ತ ಭಾರತ ನಿರ್ಮಾಣವಾಗಲಿದೆ’ ಎಂದು ಹೇಳಿದರು.</p>.<p>‘ದೇಶದಲ್ಲಿ ಕೈಗಾರಿಕಾಭಿವೃದ್ಧಿ, ಉದ್ಯೋಗ ಸೃಷ್ಟಿ, ಹಸಿವು ಮುಕ್ತ ಭಾರತ ನಿರ್ಮಾಣ, ಆರ್ಥಿಕ ಪ್ರಗತಿಯತ್ತ ಚಿಂತಿಸುವ ಬದಲು ಮೋದಿ, ಅಮಿತ್ ಶಾ ಒಡೆದಾಳುವ ನೀತಿಗೆ ಮುಂದಾಗಿದ್ದಾರೆ’ ಎಂದು ದೂರಿದರು.</p>.<p>ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ, ‘ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ಗೆ ಮಾರಾಟ ಮಾಡಿದ್ದಾರೆ. ದೇಶದ ಬೊಕ್ಕಸಕ್ಕೆ ಲಾಭ ತಂದುಕೊಡುವಂಥ ಸಂಸ್ಥೆಗಳೆಲ್ಲವನ್ನೂ ಅದಾನಿ, ಅಂಬಾನಿ ಕಂಪನಿಗೆ ಮಾರಾಟ ಮಾಡಿದರೂ ಅಚ್ಚರಿ ಇಲ್ಲ. ಈ ಕುರಿತು ರಾಜ್ಯದ ಜನ ಜಾಗೃತರಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>