ಗುರುವಾರ ವಿಚಾರವಾದಿಗಳ ಸಂಘದ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ಮಂಗಳೂರಿನ ಅತ್ತಾವರ ಸ್ಮಶಾನಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎರಡು ದಿನಗಳ ಹಿಂದೆ ಆಘೋರ ಕಾಳಿ ಸಂಹಾರ ಪೂಜೆ ನಡೆಸಿದ್ದು ಸ್ಥಳದಲ್ಲಿ ಗೊಂಬೆ, ನಿಂಬೆಹಣ್ಣು ಮತ್ತು ಪೂಜಾ ಸಾಮಗ್ರಿಗಳು ಪತ್ತೆಯಾಗಿವೆ. ಗೊಂಬೆಯು ಅಂಗಾತ ಮಲಗಿತ್ತು, ಅದಕ್ಕೆ ಬಟ್ಟೆಯನ್ನು ಸುತ್ತಲಾಗಿತ್ತು. ಅದನ್ನು ಬಿಚ್ಚಿ ನೋಡಿದಾಗ ಆ ಗೊಂಬೆಯ ಮೇಲೆ ಜೆ.ಆರ್.ಲೋಬೊ ಎಂದು ಮಲಯಾಳಂನಲ್ಲಿ ಬರೆದಿದ್ದಾರೆ ಎಂದು ನರೇಂದ್ರ ನಾಯಕ್ ತಿಳಿಸಿದ್ದಾರೆ. ಲೋಬೊ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕೇತ್ರದ ಶಾಸಕರಾಗಿದ್ದಾರೆ. ಅವರಿಗೆ ಈ ಬಾರಿಯೂ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ.