<p><strong>ಬೆಂಗಳೂರು:</strong> ‘ವಕ್ಫ್ ಬೋರ್ಡ್ ಹಣ ಸರ್ಕಾರ ತೆಗೆದುಕೊಳ್ಳಬಾರದು ಎಂಬ ಹೇಳಿಕೆ ಸಂವಿಧಾನ ವಿರೋಧಿ ಮತ್ತು ತಥಾಕಥಿತ ಜಾತ್ಯತೀತ ನೀತಿಗೆ ವಿರುದ್ಧವಾದುದು’ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಕುಟುಕಿದರು.</p>.<p>ವಕ್ಫ್ ಬೋರ್ಡ್ ಹಣ ಸರ್ಕಾರ ತೆಗೆದುಕೊಳ್ಳಬಾರದು ಎಂಬ ಜಮೀರ್ ಅವರ ಹೇಳಿಕೆಯನ್ನು ರವಿ ಬುಧವಾರ ಸುದ್ದಿಗೋಷ್ಠಿಯಲ್ಲಿಕಟುವಾಗಿ ಟೀಕಿಸಿ, ವಕ್ಫ್ ಬೋರ್ಡ್ ಸರ್ಕಾರಕ್ಕಿಂತ ದೊಡ್ಡದಲ್ಲ ಎಂದರು.</p>.<p>ಜಾತಿ–ಧರ್ಮಗಳ ಮಧ್ಯೆ ತಾರತಮ್ಯ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಜಮೀರ್ ಹೇಳಿಕೆ ಜಾತ್ಯತೀತ ತತ್ವಕ್ಕೆ ವಿರುದ್ಧವಾದುದು. ಮಾನವೀಯತೆಗೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ. ಅದು ಜಮೀರ್ ಹೇಳಿಕೆಯೋ ಅಥವಾ ಕಾಂಗ್ರೆಸ್ ಪಕ್ಷದ ಹೇಳಿಕೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಧರ್ಮದ ವಿಚಾರ ಬಂದಾಗ ಬೊಬ್ಬೆ ಹೊಡೆಯುವ ಕಾಂಗ್ರೆಸ್ ನಾಯಕರು ಜಮೀರ್ ಹೇಳಿಕೆಗೆ ಏಕೆ ಪ್ರತಿಕ್ರಿಯೆ ನೀಡುತ್ತಿಲ್ಲ. ಜಮೀರ್ ಮತಾಂಧತೆ ಉನ್ಮತ್ತತೆಯಲ್ಲಿ ಬಡಬಡಾಯಿಸುತ್ತಿದ್ದಾರೆ. ವಕ್ಫ್ಬೋರ್ಡ್ ನಡೆಯುತ್ತಿರುವುದು ಸರ್ಕಾರದ ಹಣದಿಂದ. ಅವರು ಇನ್ನೂ ಜಿನ್ನಾ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ ಎಂದು ಸಚಿವರು ಲೇವಡಿ ಮಾಡಿದರು.</p>.<p>ವಕ್ಫ್ ಬೋರ್ಡ್ನಲ್ಲಿರುವ ಹಣ ಜಕಾತ್ ಕೊಟ್ಟು ಠೇವಣಿ ಮಾಡಿದ್ದಲ್ಲ. ಜಮೀರ್ ಕೊಡುವ ಜಕಾತ್ ಹಣವನ್ನು ನಾವು ಕೇಳುವುದಿಲ್ಲ. ವಕ್ಫ್ ಹಣವನ್ನು ಹೇಗೆ ಖರ್ಚು ಮಾಡಬೇಕು ಅಂತ ಹೇಳುವ ಅಧಿಕಾರ ಅವರಿಗೆ ಇಲ್ಲ. ಅದು ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಕ್ಫ್ ಬೋರ್ಡ್ ಹಣ ಸರ್ಕಾರ ತೆಗೆದುಕೊಳ್ಳಬಾರದು ಎಂಬ ಹೇಳಿಕೆ ಸಂವಿಧಾನ ವಿರೋಧಿ ಮತ್ತು ತಥಾಕಥಿತ ಜಾತ್ಯತೀತ ನೀತಿಗೆ ವಿರುದ್ಧವಾದುದು’ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಕುಟುಕಿದರು.</p>.<p>ವಕ್ಫ್ ಬೋರ್ಡ್ ಹಣ ಸರ್ಕಾರ ತೆಗೆದುಕೊಳ್ಳಬಾರದು ಎಂಬ ಜಮೀರ್ ಅವರ ಹೇಳಿಕೆಯನ್ನು ರವಿ ಬುಧವಾರ ಸುದ್ದಿಗೋಷ್ಠಿಯಲ್ಲಿಕಟುವಾಗಿ ಟೀಕಿಸಿ, ವಕ್ಫ್ ಬೋರ್ಡ್ ಸರ್ಕಾರಕ್ಕಿಂತ ದೊಡ್ಡದಲ್ಲ ಎಂದರು.</p>.<p>ಜಾತಿ–ಧರ್ಮಗಳ ಮಧ್ಯೆ ತಾರತಮ್ಯ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಜಮೀರ್ ಹೇಳಿಕೆ ಜಾತ್ಯತೀತ ತತ್ವಕ್ಕೆ ವಿರುದ್ಧವಾದುದು. ಮಾನವೀಯತೆಗೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ. ಅದು ಜಮೀರ್ ಹೇಳಿಕೆಯೋ ಅಥವಾ ಕಾಂಗ್ರೆಸ್ ಪಕ್ಷದ ಹೇಳಿಕೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಧರ್ಮದ ವಿಚಾರ ಬಂದಾಗ ಬೊಬ್ಬೆ ಹೊಡೆಯುವ ಕಾಂಗ್ರೆಸ್ ನಾಯಕರು ಜಮೀರ್ ಹೇಳಿಕೆಗೆ ಏಕೆ ಪ್ರತಿಕ್ರಿಯೆ ನೀಡುತ್ತಿಲ್ಲ. ಜಮೀರ್ ಮತಾಂಧತೆ ಉನ್ಮತ್ತತೆಯಲ್ಲಿ ಬಡಬಡಾಯಿಸುತ್ತಿದ್ದಾರೆ. ವಕ್ಫ್ಬೋರ್ಡ್ ನಡೆಯುತ್ತಿರುವುದು ಸರ್ಕಾರದ ಹಣದಿಂದ. ಅವರು ಇನ್ನೂ ಜಿನ್ನಾ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ ಎಂದು ಸಚಿವರು ಲೇವಡಿ ಮಾಡಿದರು.</p>.<p>ವಕ್ಫ್ ಬೋರ್ಡ್ನಲ್ಲಿರುವ ಹಣ ಜಕಾತ್ ಕೊಟ್ಟು ಠೇವಣಿ ಮಾಡಿದ್ದಲ್ಲ. ಜಮೀರ್ ಕೊಡುವ ಜಕಾತ್ ಹಣವನ್ನು ನಾವು ಕೇಳುವುದಿಲ್ಲ. ವಕ್ಫ್ ಹಣವನ್ನು ಹೇಗೆ ಖರ್ಚು ಮಾಡಬೇಕು ಅಂತ ಹೇಳುವ ಅಧಿಕಾರ ಅವರಿಗೆ ಇಲ್ಲ. ಅದು ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>