ಹೀಗಾಗಿ, ಎತ್ತಿನಹೊಳೆ ನೀರನ್ನು ಅನಿವಾರ್ಯವಾಗಿ ತರಬೇಕಾಗಿದೆ. ಅದೂ ಮೂರು ತಿಂಗಳಿಗಷ್ಟೇ ಸಾಕಾಗುತ್ತದೆ. ಅಲ್ಲೂ ಸಾಕಷ್ಟು ಸಮಸ್ಯೆಗಳಿವೆ. ಈ ನೀರನ್ನು ತರುವ ವೇಳೆ ಕಾಲುವೆಗೆ ಪಂಪ್ ಹಾಕಿ ನೀರು ಕದಿಯುವ ಸಾಧ್ಯತೆಯೂ ಇರುತ್ತದೆ. ಇದನ್ನು ತಡೆಗಟ್ಟಲೂ ಕ್ರಮ ಕೈಗೊಳ್ಳಬೇಕು’ ಎಂದು ಅವರು ಹೇಳಿದರು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿರ್ವಹಿಸಲು ಸಾಕಷ್ಟು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.