ಕಲಬುರ್ಗಿ: ‘ಬೇಸಿಗೆ ಕಾಲದಲ್ಲಿ ಮಹಾರಾಷ್ಟ್ರದಿಂದ ಭೀಮಾ ಹಾಗೂ ಕೃಷ್ಣಾ ನದಿಗಳಿಗೆ ನೀರು ಹರಿಸುವ ಸಂಬಂಧ ಚರ್ಚಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಎರಡು ಬಾರಿ ಮನವಿ ಮಾಡಿದ್ದೆ. ಹಲವು ಪತ್ರಗಳನ್ನೂ ಬರೆದಿದ್ದೇನೆ. ಆದರೆ, ಅವರು ಇನ್ನೂ ಸಮಯ ನಿಗದಿ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.