ತಾಲ್ಲೂಕಿನ ತೆಗ್ಗಿನ ಭಾವನೂರ ಗ್ರಾಮದ ವೆಂಕನಗೌಡ ಪಾಟೀಲ ಅವರು 1.20 ಎಕರೆ ಪ್ರದೇಶದಲ್ಲಿ ‘ಕ್ಲಾಸ್ ಮೆಲೋಡಿ’ ತಳಿಯ ಕಲ್ಲಂಗಡಿ ಬೆಳೆದಿದ್ದರು. ಲಾಕ್ಡೌನ್ ಅವಧಿಯಲ್ಲಿ ಬೆಳೆಗೆ ಮಾರುಕಟ್ಟೆ ಕಂಡುಕೊಳ್ಳಲು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿದರು. ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಕುಂಬಾರ ಸಲಹೆ ಮೇರೆಗೆ, ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲ್ಲೂಕಿನಲ್ಲಿ ಚಿಲ್ಲರೆ ವ್ಯಾಪಾರಿಗಳು, ಗ್ರಾಹಕರಿಗೆ ನೇರವಾಗಿ ಹಣ್ಣು ಮಾರಾಟ ಮಾಡಿದರು.