<p><strong>ಹಾಸನ: </strong>ಗೊರೂರಿನ ಹೇಮಾವತಿ ಜಲಾಶಯದಿಂದ ಶನಿವಾರ ಬೆಳಿಗ್ಗೆ ನೀರು ಹೊರಬಿಡಲಾಯಿತು.</p>.<p>ಮೂರು ವರ್ಷದ ಬಳಿಕ ಜಲಾಶಯ ಭರ್ತಿಯಾಗಿದೆ.ಅಣೆಕಟ್ಟೆಯ ಆರು ಕ್ರಸ್ಟ್ ಗೇಟ್ಗಳಿಂದ 15 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<p>ಇದೇ ವೇಳೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರುಸುಬ್ರಹ್ಮಣ್ಯ ಮತ್ತು ಗಣಪತಿ ದೇವರಿಗೆ ಪೂಜೆ ಸಲ್ಲಿಸಿ, ಕ್ರಸ್ಟ್ ಗೇಟ್ಗಳನ್ನು ತೆರೆದರು.</p>.<p>ಜಲಾಶಯದ ಗರಿಷ್ಠ ಮಟ್ಟ 2922 ಅಡಿ. ಜಲಾನಯನ ಪ್ರದೇಶಗಳಾದ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಮಳೆ ಬಿರುಸುಗೊಂಡಿರುವುದರಿಂದ ಅಣೆಕಟ್ಟೆಗೆ 24 ಸಾವಿರ ಕ್ಯುಸೆಕ್ ನೀರು ಬರುತ್ತಿದೆ.</p>.<p>ಅಣೆಕಟ್ಟೆ ನಿರ್ಮಾಣದ ಬಳಿಕ ಇದೇ ಮೊದಲು ಬಾರಿಗೆ ಅಣ್ಣೆಕಟ್ಟೆ ತುಂಬಿದೆ. 2013ರಲ್ಲಿ ಜುಲೈ 26ಕ್ಕೆ ಭರ್ತಿಯಾಗಿದ್ದು ಈ ಹಿಂದಿನ ದಾಖಲೆಯಾಗಿತ್ತು .</p>.<p>ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಹೊರ ಹರಿವಿನ ಪ್ರಮಾಣ ಹೆಚ್ಚಿಸಲಾಗುವುದು ಎಂದು ಅಣೆಕಟ್ಟೆ ಅಧೀಕ್ಷಕ ಎಂಜಿನಿಯರ್ ತಿಳಿಸಿದರು.</p>.<p>ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಜನರನ್ನು ಸ್ಥಳಾಂತರಿಸಲಾಗಿದೆ ಎಂದರು.</p>.<p>ಅಚ್ಚುಕಟ್ಟು ಭಾಗದ ರೈತರು ಮೂರು ವರ್ಷದಿಂದ ಬೆಳೆ ಬೆಳದಿರಲಿಲ್ಲ. ಇದೀಗ ಅಣ್ಣೆಕಟ್ಟೆಯಿಂದ ನೀರು ಬಿಟ್ಟಿರುವುದಕ್ಕೆ ರೈತರಲ್ಲಿ ಸಂತಸ ಮೂಡಿದೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಗೊರೂರಿನ ಹೇಮಾವತಿ ಜಲಾಶಯದಿಂದ ಶನಿವಾರ ಬೆಳಿಗ್ಗೆ ನೀರು ಹೊರಬಿಡಲಾಯಿತು.</p>.<p>ಮೂರು ವರ್ಷದ ಬಳಿಕ ಜಲಾಶಯ ಭರ್ತಿಯಾಗಿದೆ.ಅಣೆಕಟ್ಟೆಯ ಆರು ಕ್ರಸ್ಟ್ ಗೇಟ್ಗಳಿಂದ 15 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<p>ಇದೇ ವೇಳೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರುಸುಬ್ರಹ್ಮಣ್ಯ ಮತ್ತು ಗಣಪತಿ ದೇವರಿಗೆ ಪೂಜೆ ಸಲ್ಲಿಸಿ, ಕ್ರಸ್ಟ್ ಗೇಟ್ಗಳನ್ನು ತೆರೆದರು.</p>.<p>ಜಲಾಶಯದ ಗರಿಷ್ಠ ಮಟ್ಟ 2922 ಅಡಿ. ಜಲಾನಯನ ಪ್ರದೇಶಗಳಾದ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಮಳೆ ಬಿರುಸುಗೊಂಡಿರುವುದರಿಂದ ಅಣೆಕಟ್ಟೆಗೆ 24 ಸಾವಿರ ಕ್ಯುಸೆಕ್ ನೀರು ಬರುತ್ತಿದೆ.</p>.<p>ಅಣೆಕಟ್ಟೆ ನಿರ್ಮಾಣದ ಬಳಿಕ ಇದೇ ಮೊದಲು ಬಾರಿಗೆ ಅಣ್ಣೆಕಟ್ಟೆ ತುಂಬಿದೆ. 2013ರಲ್ಲಿ ಜುಲೈ 26ಕ್ಕೆ ಭರ್ತಿಯಾಗಿದ್ದು ಈ ಹಿಂದಿನ ದಾಖಲೆಯಾಗಿತ್ತು .</p>.<p>ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಹೊರ ಹರಿವಿನ ಪ್ರಮಾಣ ಹೆಚ್ಚಿಸಲಾಗುವುದು ಎಂದು ಅಣೆಕಟ್ಟೆ ಅಧೀಕ್ಷಕ ಎಂಜಿನಿಯರ್ ತಿಳಿಸಿದರು.</p>.<p>ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಜನರನ್ನು ಸ್ಥಳಾಂತರಿಸಲಾಗಿದೆ ಎಂದರು.</p>.<p>ಅಚ್ಚುಕಟ್ಟು ಭಾಗದ ರೈತರು ಮೂರು ವರ್ಷದಿಂದ ಬೆಳೆ ಬೆಳದಿರಲಿಲ್ಲ. ಇದೀಗ ಅಣ್ಣೆಕಟ್ಟೆಯಿಂದ ನೀರು ಬಿಟ್ಟಿರುವುದಕ್ಕೆ ರೈತರಲ್ಲಿ ಸಂತಸ ಮೂಡಿದೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>