ಕೊಯ್ನಾ ಅಲ್ಲದೇ,ದಕ್ಷಿಣ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಮುಂದುವರಿದ ಪರಿಣಾಮವಾಗಿ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದುಬರುತ್ತಿದೆ. ಅಲ್ಲಿನ ರಾಜಾಪುರ ಬ್ಯಾರೇಜ್ನಿಂದ 1,63,975 ಕ್ಯುಸೆಕ್ ಹಾಗೂ ದೂಧ್ಗಂಗಾ ನದಿಯಿಂದ 32,032 ಕ್ಯುಸೆಕ್ ಸೇರಿ ಚಿಕ್ಕೋಡಿಯ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,96,007 ಕ್ಯುಸೆಕ್ ನೀರು ಸೇರ್ಪಡೆಯಾಗುತ್ತಿದೆ.