<p><strong>ಬೆಂಗಳೂರು:</strong> ‘ಘನತ್ಯಾಜ್ಯ ನಿರ್ವಹಣೆ, ಮಳೆ ನೀರು ಸಂಗ್ರಹಣೆ ಮತ್ತು ಜಲಮೂಲಗಳ ಸಂರಕ್ಷಣೆ ಸ್ಥಳೀಯ ಸಂಸ್ಥೆಗಳ ಆದ್ಯತೆ ಆಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಸ್ಮಾರ್ಟ್ ಮತ್ತು ಸುಸ್ಥಿರ ನಗರಕ್ಕೆ ಪರಿಹಾರಗಳು ಕುರಿತು ಅರಮನೆ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನ ಹಾಗೂ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಹೆಚ್ಚು ಆವಿಷ್ಕಾರಗಳು ನಡೆಯಬೇಕು. ಜಲ ಮತ್ತು ಇಂಧನ ಮೂಲಗಳ ಮಿತವ್ಯಯ ಮತ್ತು ಪರಿಸರ ಸಂರಕ್ಷಣೆ ಹಿಂದಿಗಿಂತ ಈಗ ಹೆಚ್ಚು ಅವಶ್ಯ. ಪ್ರವಾಹ, ಭೂಕುಸಿತ ರೀತಿಯ ಪ್ರಕೃತಿ ವಿಕೋಪಗಳಿಂದ ನಗರಗಳನ್ನು ರಕ್ಷಿಸುವ ನಿಟ್ಟಿನಲ್ಲೂ ಯೋಚನೆ ಮಾಡಬೇಕು’ ಎಂದರು.</p>.<p>‘ವಿಶ್ವದ ಎಲ್ಲ ನಗರಗಳಿಗೂ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ನಗರದಲ್ಲಿ ಸಂಚಾರ ಸುಗಮಗೊಳಿಸಲು ಉಪನಗರ ರೈಲು, ಸಮೀಪದ ನಗರಗಳಿಗೆ ತ್ವರಿತ ಸೇವೆ ಒದಗಿಸಲು ಹೈಸ್ಪೀಡ್ ರೈಲು ಸಂಪರ್ಕ ಕಲ್ಪಿಸಲಾಗುವುದು’ ಎಂದು ಹೇಳಿದರು.</p>.<p>ಕಸ ಪತ್ತೆಗೆ ಕೃತಕ ಬುದ್ಧಿಮತ್ತೆ</p>.<p>ಕೃತಕ ಬುದ್ಧಿಮತ್ತೆ ಬಳಸಿಕೊಂಡು ಕಸ ಪತ್ತೆ ಮತ್ತು ನಿರ್ವಹಣೆ ವ್ಯವಸ್ಥೆಯನ್ನು ಬೆಳಗಾವಿ ಪಾಲಿಕೆ ಅಳವಡಿಸಿಕೊಂಡಿದ್ದು, ಬೆಂಗಳೂರಿನಲ್ಲೂ ಈ ಮಾದರಿ ಅನುಸರಿಸಲು ತಯಾರಿ ನಡೆಯುತ್ತಿದೆ.</p>.<p>ಎಸ್ಸಿಎನ್ ಇನ್ನೋವೇಷನ್ಸ್ ಕಂಪನಿ ಈ ಆ್ಯಪ್ ಅಭಿವೃದ್ಧಿಪಡಿಸಿದೆ. ಕಸ ಬಿದ್ದಿರುವುದನ್ನು ಮೊಬೈಲ್ನಲ್ಲಿ ಚಿತ್ರ ತೆಗೆದು ಆ್ಯಪ್ಗೆ ಅಪ್ಲೋಡ್ ಮಾಡಿದರೆ ಅದು ಯಾವ ಮಾದರಿಯ ಕಸ(ಒಣ, ಹಸಿ ಅಥವಾ ಪ್ಲಾಸ್ಟಿಕ್) ಎಂಬುದು ಸರ್ವರ್ ಮೂಲಕ ಪಾಲಿಕೆಗೆ ತಿಳಿಯಲಿದೆ.</p>.<p>‘ಪೋಟೋ ತೆಗೆದ ಜಾಗ ಕೂಡ ಜಿಪಿಎಸ್ನಿಂದ ಪತ್ತೆಯಾಗಲಿದ್ದು, ಆ ಸ್ಥಳಕ್ಕೆ ಪಾಲಿಕೆ ಸಿಬ್ಬಂದಿ ಕೂಡಲೇ ಹೋಗಿ ಕಸ ಸ್ವಚ್ಛಗೊಳಿಸಬಹುದು. ಎಷ್ಟು ಕಸ ಇದೆ ಎಂಬುದು ನಿಖರವಾಗಿ ತಿಳಿಯುವುದರಿಂದ ಕಸ ಸಂಸ್ಕರಿಸಿ ಮಾರಾಟ ಮಾಡುವುದರಿಂದ ಬರುವ ವರಮಾನವೂ ವೃದ್ಧಿಯಾಗಲಿದೆ’ ಎಂದು ಎಸ್ಸಿಎನ್ ಇನ್ನೋವೇಷನ್ ಎಲ್ಎಲ್ಪಿಯ ಸುಮಿತ್ ಅನ್ವೇಕರ್ ತಿಳಿಸಿದರು.</p>.<p>‘ಈ ವ್ಯವಸ್ಥೆ ಬೆಂಗಳೂರಿನಲ್ಲಿ ಅಳವಡಿಸುವ ಬಗ್ಗೆ ಬಿಬಿಎಂಪಿ ಜತೆ ಮಾತುಕತೆ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಘನತ್ಯಾಜ್ಯ ನಿರ್ವಹಣೆ, ಮಳೆ ನೀರು ಸಂಗ್ರಹಣೆ ಮತ್ತು ಜಲಮೂಲಗಳ ಸಂರಕ್ಷಣೆ ಸ್ಥಳೀಯ ಸಂಸ್ಥೆಗಳ ಆದ್ಯತೆ ಆಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಸ್ಮಾರ್ಟ್ ಮತ್ತು ಸುಸ್ಥಿರ ನಗರಕ್ಕೆ ಪರಿಹಾರಗಳು ಕುರಿತು ಅರಮನೆ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನ ಹಾಗೂ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಹೆಚ್ಚು ಆವಿಷ್ಕಾರಗಳು ನಡೆಯಬೇಕು. ಜಲ ಮತ್ತು ಇಂಧನ ಮೂಲಗಳ ಮಿತವ್ಯಯ ಮತ್ತು ಪರಿಸರ ಸಂರಕ್ಷಣೆ ಹಿಂದಿಗಿಂತ ಈಗ ಹೆಚ್ಚು ಅವಶ್ಯ. ಪ್ರವಾಹ, ಭೂಕುಸಿತ ರೀತಿಯ ಪ್ರಕೃತಿ ವಿಕೋಪಗಳಿಂದ ನಗರಗಳನ್ನು ರಕ್ಷಿಸುವ ನಿಟ್ಟಿನಲ್ಲೂ ಯೋಚನೆ ಮಾಡಬೇಕು’ ಎಂದರು.</p>.<p>‘ವಿಶ್ವದ ಎಲ್ಲ ನಗರಗಳಿಗೂ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ನಗರದಲ್ಲಿ ಸಂಚಾರ ಸುಗಮಗೊಳಿಸಲು ಉಪನಗರ ರೈಲು, ಸಮೀಪದ ನಗರಗಳಿಗೆ ತ್ವರಿತ ಸೇವೆ ಒದಗಿಸಲು ಹೈಸ್ಪೀಡ್ ರೈಲು ಸಂಪರ್ಕ ಕಲ್ಪಿಸಲಾಗುವುದು’ ಎಂದು ಹೇಳಿದರು.</p>.<p>ಕಸ ಪತ್ತೆಗೆ ಕೃತಕ ಬುದ್ಧಿಮತ್ತೆ</p>.<p>ಕೃತಕ ಬುದ್ಧಿಮತ್ತೆ ಬಳಸಿಕೊಂಡು ಕಸ ಪತ್ತೆ ಮತ್ತು ನಿರ್ವಹಣೆ ವ್ಯವಸ್ಥೆಯನ್ನು ಬೆಳಗಾವಿ ಪಾಲಿಕೆ ಅಳವಡಿಸಿಕೊಂಡಿದ್ದು, ಬೆಂಗಳೂರಿನಲ್ಲೂ ಈ ಮಾದರಿ ಅನುಸರಿಸಲು ತಯಾರಿ ನಡೆಯುತ್ತಿದೆ.</p>.<p>ಎಸ್ಸಿಎನ್ ಇನ್ನೋವೇಷನ್ಸ್ ಕಂಪನಿ ಈ ಆ್ಯಪ್ ಅಭಿವೃದ್ಧಿಪಡಿಸಿದೆ. ಕಸ ಬಿದ್ದಿರುವುದನ್ನು ಮೊಬೈಲ್ನಲ್ಲಿ ಚಿತ್ರ ತೆಗೆದು ಆ್ಯಪ್ಗೆ ಅಪ್ಲೋಡ್ ಮಾಡಿದರೆ ಅದು ಯಾವ ಮಾದರಿಯ ಕಸ(ಒಣ, ಹಸಿ ಅಥವಾ ಪ್ಲಾಸ್ಟಿಕ್) ಎಂಬುದು ಸರ್ವರ್ ಮೂಲಕ ಪಾಲಿಕೆಗೆ ತಿಳಿಯಲಿದೆ.</p>.<p>‘ಪೋಟೋ ತೆಗೆದ ಜಾಗ ಕೂಡ ಜಿಪಿಎಸ್ನಿಂದ ಪತ್ತೆಯಾಗಲಿದ್ದು, ಆ ಸ್ಥಳಕ್ಕೆ ಪಾಲಿಕೆ ಸಿಬ್ಬಂದಿ ಕೂಡಲೇ ಹೋಗಿ ಕಸ ಸ್ವಚ್ಛಗೊಳಿಸಬಹುದು. ಎಷ್ಟು ಕಸ ಇದೆ ಎಂಬುದು ನಿಖರವಾಗಿ ತಿಳಿಯುವುದರಿಂದ ಕಸ ಸಂಸ್ಕರಿಸಿ ಮಾರಾಟ ಮಾಡುವುದರಿಂದ ಬರುವ ವರಮಾನವೂ ವೃದ್ಧಿಯಾಗಲಿದೆ’ ಎಂದು ಎಸ್ಸಿಎನ್ ಇನ್ನೋವೇಷನ್ ಎಲ್ಎಲ್ಪಿಯ ಸುಮಿತ್ ಅನ್ವೇಕರ್ ತಿಳಿಸಿದರು.</p>.<p>‘ಈ ವ್ಯವಸ್ಥೆ ಬೆಂಗಳೂರಿನಲ್ಲಿ ಅಳವಡಿಸುವ ಬಗ್ಗೆ ಬಿಬಿಎಂಪಿ ಜತೆ ಮಾತುಕತೆ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>